Breaking News

ಬಂಡಾಯ ಅಭ್ಯರ್ಥಿಯಾದ ಪರ್ರಿಕರ್ ಪುತ್ರ

Spread the love

ಪಣಜಿ: ಗೋವಾ ವಿಧಾನಸಭಾ ಚುನಾವಣೆಯಲ್ಲಿ ಪಣಜಿ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಫರ್ಧಿಸುವುದಾಗಿ ಗೋವಾ ಮಾಜಿ ಮುಖ್ಯಮಂತ್ರಿ ದಿ.ಮನೋಹರ್ ಪರ್ರಿಕರ್ ಪುತ್ರ ಉತ್ಪಲ್ ಪರ್ರಿಕರ್ ಶುಕ್ರವಾರ ಘೋಷಿಸಿದ್ದಾರೆ.

ಪಣಜಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ರಾಜಕೀಯ ಭವಿಷ್ಯದ ಕುರಿತು ರಾಜ್ಯದ ಜನತೆ ನಿರ್ಧರಿಸಲಿದ್ದಾರೆ.

ಕೇವಲ ಮನೋಹರ್ ಪರ್ರಿಕರ್ ರವರ ತತ್ವ ಸಿದ್ಧಾಂತಗಳನ್ನು ಮುಂದುವರೆಸಿಕೊಂಡು ಹೋಗಲು ನಾನು ಪಣಜಿ ಕ್ಷೇತ್ರದಿಂದ ಸ್ಫರ್ಧಿಸುತ್ತಿದ್ದೇನೆ ಎಂದರು.

ಪಣಜಿ ಕ್ಷೇತ್ರದ ಹಾಲಿ ಬಿಜೆಪಿಯ ಉಮೇದುವಾರರ ಬಗ್ಗೆ ಮಾತನಾಡುವುದು ಕೂಡ ನಾಚಿಕೆಗೇಡಿನ ಸಂಗತಿ. ನನಗೆ ಬೇರೆ ಪಕ್ಷಗಳಿಗೆ ಹೋಗುವ ಯೋಚನೆಯೂ ಇಲ್ಲ ಎಂದರು.

ನನಗೆ ಹಲವು ರಾಜಕೀಯ ಪಕ್ಷಗಳು ಆಫರ್ ನೀಡಿವೆ. ನಾನು ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ನನ್ನ ತಂದೆಯವರೊಂದಿಗೆ ಕೆಲಸ ಮಾಡಿದವರಿಗಾಗಿ ನಾನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಫರ್ಧಿಸುತ್ತಿದ್ದೇನೆ.

 


Spread the love

About Laxminews 24x7

Check Also

ಮಾಜಿ ಸಚಿವ ಎಂ. ಪಿ ರೇಣುಕಾಚಾರ್ಯ ವಿರುದ್ಧ ಶಾಸಕ ಶಿವಗಂಗಾ ಬಸವರಾಜ್ ವಾಗ್ದಾಳಿ ನಡೆಸಿದ್ದಾರೆ.

Spread the loveದಾವಣಗೆರೆ : ಲೋಕಸಭೆ ಚುನಾವಣೆಯಲ್ಲಿ ಯಾರ ಬಳಿ ಎಷ್ಟು ಕೋಟಿ ರೂಪಾಯಿ ಹಣ ಪಡೆದಿದ್ದೀಯಾ ಎಂಬುದು ಗೊತ್ತಿದೆ. ಭದ್ರಾವತಿಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ