ಅಂತರ ರಾಜ್ಯ ಜಲ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯಕ್ಕೆ ಸಂಬಂಧಪಟ್ಟ ಅಂತರಾಜ್ಯ ಜಲ ವಿವಾದಗಳ ಬಗ್ಗೆ ಸರ್ವೋಚ್ಚ ನ್ಯಾಲಯಗಳಲ್ಲಿ ಇದ್ದಂತಹ ಪ್ರಕರಣಗಳಿಗೆ ಸಿ.ಎಂ ಬಸವರಾಜ ಬೊಮ್ಮಾಯಿಯವರ ಅಧ್ಯಕ್ತೆಯಲ್ಲಿ ಇಂದು ಕಾನುನು ತಂಡ ಮತ್ತು ಅಧಿಕಾರಿಗಳ ಸಭೆಯಲ್ಲಿ ಕೃಷ್ಣಾ ಜಲ ವಿವಾದಕ್ಕೆ ಸಂಬಂಧಪಟ್ಟಂತೆ ನ್ಯಾಯಪೀಠದ ಇಬ್ಬರೂ ಸದಸ್ಯರು ಹಿಂದೆ ಸರಿದ ಕಾರಣ ಈ ಕೂಡಲೇ ಪೀಠವನ್ನು ರಚನೆ ಮಾಡಲು ಆಡಳಿತಾತ್ಮಕ ರೆÀಜಿಸ್ಟ್ರಾರ್ ಅವರಿಗೆ ಸೋಮವಾರ ಮನವಿ ಮಾಡಲು ನಿರ್ಧಾರಿಸಲಾಗಿದೆ. ಮೇಕೆದಾಟು ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಫೆ.16 ಕ್ಕೆ ಸರ್ವೋಚ್ಚ ನ್ಯಾಯಾಲಯಕ್ಕೆ ಪ್ರಕರಣ ಬರುವುದರಿಂದ ವಿಚಾರಣೆಗೂ ಮುನ್ನ ಸಿ.ಎಂ ನೇತೃತ್ವದ ಸಭೆಯನ್ನು ಆಯೋಜಿಸಲಾಗುವುದು ಎಂದರು
Check Also
ಹೆಸರು ಬದಲಿಸಿಕೊಂಡ ಅಗ್ನಿಸಾಕ್ಷಿ ನಟ ವಿಜಯ್ ಸೂರ್ಯ; ಹೊಸ ಹೆಸರೇನು?
Spread the love ನಟ ವಿಜಯ್ ಸೂರ್ಯ ಯಾರಿಗೆ ತಾನೆ ಪರಿಚಯ ಇಲ್ಲ ಹೇಳಿ. ಗುಳಿ ಕೆನ್ನೆ, ಕ್ಯೂಟ್ ಸ್ಮೈಲ್, …