ಹರಿಹರ
ಹರಿಹರದ ಹರಿಹರೇಶ್ವರ ದೇವಸ್ಥಾನಕ್ಕೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ.ಶಶಿಕಲಾ ಜೊಲ್ಲೆ ಜಿ ಯವರು ಭೇಟಿ ನೀಡಿ, ದೇವರ ದರುಶನ ಪಡೆದು, ಅಕ್ಕಮಹಾದೇವಿ ವಚನ ವಿಜಯೋತ್ಸವದ ಮೆರವಣಿಗೆಯಲ್ಲಿ ಭಾಗವಹಿಸಿ, ಮಹಾದೇವಿ ಅಕ್ಕನ ವಚನ ಕಟ್ಟುಗಳನ್ನು ಆನೆ ಅಂಬಾರಿಯಲ್ಲಿರಿಸಿ, ವಚನ ಗ್ರಂಥಗಳನ್ನು ತಲೆಮೇಲಿಟ್ಟುಕೊಂಡು ಅಕ್ಕನ ವಚನಗಳನ್ನು ಸಾಮೂಹಿಕ ಪಠಣದೊಂದಿಗೆ ಧಾರ್ಮಿಕ, ಸಾಮಾಜಿಕ, ಐತಿಹಾಸಿಕ ಸ್ತಬ್ದ ದೃಶ್ಯಗಳು, ಜಾನಪದ ಕಲಾಮೇಳದೊಂದಿಗೆ ಹರಿಹರದ ಹರಿಹರೇಶ್ವರ ದೇವಸ್ಥಾನದಿಂದ ಬೃಹತ್ ಮೆರವಣಿಗೆಯಲ್ಲಿ ಶ್ರೀಕಾಂತ ಟಾಕೀಜ್ ವರೆಗೆ ಸಾಗಿದರು.
ಈ ಕಾರ್ಯಕ್ರಮದಲ್ಲಿ ಹರಿಹರದ ವೀರಶೈವ ಲಿಂಗಾಯತ ಯೋಗ ಸಿಂಹಾಸನಾಧೀಶ್ವರ ಪಂಚಮಸಾಲಿ ಜಗದ್ಗುರು ಶ್ರೀ ಶ್ರೀ ಶ್ರೀ ವಚನಾನಂದ ಮಹಾಸ್ವಾಮಿಗಳು ಸಾನಿಧ್ಯ ವಹಿಸಿದ್ದರು ಹಾಗೂ ನಟಿ ರಾಗಿಣಿ ದ್ವಿವೇದಿ, ಶಾಸಕರಾದ ಅರುಣ್ ಕುಮಾರ ಪೂಜಾರ ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.