Breaking News
Home / new delhi / ಇಂದು ಪ್ರಧಾನಿ ಮೋದಿಯಿಂದ ನೇತಾಜಿ ಸುಭಾಷ್​ ಚಂದ್ರ ಬೋಸ್​ರ ಹೊಲೋಗ್ರಾಮ್​ ಪ್ರತಿಮೆ ಅನಾವರಣ

ಇಂದು ಪ್ರಧಾನಿ ಮೋದಿಯಿಂದ ನೇತಾಜಿ ಸುಭಾಷ್​ ಚಂದ್ರ ಬೋಸ್​ರ ಹೊಲೋಗ್ರಾಮ್​ ಪ್ರತಿಮೆ ಅನಾವರಣ

Spread the love

ಗಣರಾಜ್ಯೋತ್ಸವ ಆಚರಣೆ ದೇಶದಲ್ಲಿ ಇಂದಿನಿಂದಲೇ ಪ್ರಾರಂಭವಾಗಲಿದೆ. ಇಂದು ನೇತಾಜಿ ಸುಭಾಷ್​ ಚಂದ್ರ ಬೋಸ್​ ಅವರ ಜನ್ಮದಿನ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೆಹಲಿಯಲ್ಲಿ ನೇತಾಜಿಯವರ ಹೊಲೋಗ್ರಾಮ್​ ಪ್ರತಿಮೆ (ಲೇಸರ್ ಅಥವಾ ಅಂಥ ಇತರ ಬೆಳಕಿನ ಕಿರಣಗಳ ಟಚ್​ ಕೊಡಲಾದ  ಮೂರು ಆಯಾಮದ ಪ್ರತಿಮೆ). ದೇಶದಲ್ಲಿ ಸಾಮಾನ್ಯವಾಗಿ ಜನವರಿ 24ರಿಂದ ಗಣರಾಜ್ಯೋತ್ಸವ ದಿನಾಚರಣೆ ಶುರುವಾಗುತ್ತಿತ್ತು. ಆದರೆ ಈ ಬಾರಿ ನೇತಾಜಿ ಸುಭಾಷ್​ ಚಂದ್ರ ಬೋಸ್​ ಜನ್ಮದಿನದಿಂದಲೇ ಗಣರಾಜ್ಯೋತ್ಸವ ಸಂಭ್ರಮವೂ ಶುರುವಾಗಲಿದೆ ಎಂದು ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಹೇಳಿದೆ.

ನೇತಾಜಿ ಸುಭಾಷ್​ ಚಂದ್ರ ಬೋಸ್​ ಪ್ರತಿಮೆಯನ್ನು ಗ್ರಾನೈಟ್​​ನಿಂದ ಮಾಡಲಾಗಿದ್ದು, ಅದನ್ನು ಇಂಡಿಯಾ ಗೇಟ್​ ಬಳಿ ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.  ಈ ಬಗ್ಗೆ ನಿನ್ನೆ ಟ್ವೀಟ್ ಮಾಡಿದ್ದ ಪ್ರಧಾನಿ ಮೋದಿ, ಈ ಬಾರಿ ದೇಶ ನೇತಾಜಿ ಸುಭಾಷ್​ ಚಂದ್ರ ಅವರ 125ನೇ ಜನ್ಮ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ಗ್ರಾನೈಟ್​​ನಿಂದ ನಿರ್ಮಿಸಲಾದ ಅವರ ಬಹುದೊಡ್ಡ ಪ್ರತಿಮೆಯನ್ನು ಇಂಡಿಯಾ ಗೇಟ್​ಬಳಿ ಸ್ಥಾಪಿಸಲಾಗುತ್ತಿರುವುದಕ್ಕೆ ನನಗೆ ತುಂಬ ಸಂತೋಷವಾಗುತ್ತಿದೆ. ನೇತಾಜಿಯವರ ಋಣ ತೀರಿಸುವ ಒಂದು ಅವಕಾಶ ಎಂದೇ ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ. ನೇತಾಜಿ ಸುಭಾಷ್​ ಚಂದ್ರ ಬೋಸ್​ ಅವರ ಗ್ರಾನೈಟ್​ ಪ್ರತಿಮೆ ಪೂರ್ಣಗೊಳ್ಳಲು ಇನ್ನೂ ಸಮಯ ಬೇಕು. ಅಲ್ಲಿಯವರೆಗೆ ಈ ಹೊಲೋಗ್ರಾಮ್​ ಪ್ರತಿಮೆ ಇರುತ್ತದೆ ಎಂದೂ ಪ್ರಧಾನಿ ತಿಳಿಸಿದ್ದಾರೆ. ಸುಭಾಷ್​ ಚಂದ್ರ ಬೋಸ್ ಅವರ ಹೊಲೋಗ್ರಾಮ್​ ಮೂರ್ತಿ 30 ಸಾವಿರ ಲ್ಯೂಮೆನ್ಸ್​ 4ಕೆ ಪ್ರಾಜೆಕ್ಟರ್​​ನಿಂದ ಚಾಲಿತವಾಗಿದೆ ಎಂದು ಪಿಎಂಒ ತಿಳಿಸಿದೆ.

ಇಂಡಿಯಾ ಗೇಟ್​​ನ ಬಳಿಯಿದ್ದ ಅಮರ ಜವಾನ್​ ಜ್ಯೋತಿಯನ್ನು ಯುದ್ಧ ಸ್ಮಾರಕ ಜ್ಯೋತಿಯೊಂದಿಗೆ ಶುಕ್ರವಾರ ವಿಲೀನಗೊಳಿಸಲಾಗಿದೆ. ಇದೀಗ ಆ ಅಮರ ಜವಾನ್ ಜ್ಯೋತಿ ಇದ್ದ ಜಾಗದ ಮೇಲ್ಛಾವಣಿ ಮೇಲೆ ನೇತಾಜಿ ಸುಭಾಷ್​ ಚಂದ್ರಬೋಸ್ ಅವರ ಹೊಲೋಗ್ರಾಮ್​ ಪ್ರತಿಮೆ ಅನಾವರಣಗೊಳ್ಳಲಿದೆ. ಗ್ರಾನೈಟ್​ನ ಭವ್ಯ ಮೂರ್ತಿ ಪೂರ್ಣಪ್ರಮಾಣದಲ್ಲಿ ಸಿದ್ಧ ಆಗುವವರೆಗೂ ಈ ಪ್ರತಿಮೆ ಇರಲಿದೆ.  ಅಂದಹಾಗೇ, ಸುಭಾಷ್​ ಚಂದ್ರ ಬೋಸ್​​ ಅವರ ಗ್ರಾನೈಟ್​ ಪ್ರತಿಮೆ 28 ಅಡಿ ಎತ್ತರ ಮತ್ತು ಆರು ಅಡಿ ಅಗಲ ಇರಲಿದೆ ಎಂದು ನ್ಯಾಶನಲ್​ ಮಾಡರ್ನ್​ ಆರ್ಟ್​ ಗ್ಯಾಲರಿಯ ಪ್ರಧಾನ ನಿರ್ದೇಶಕರಾದ ಅದ್ವೈತಾ ಗಡನಾಯಕ್​ ತಿಳಿಸಿದ್ದಾರೆ. ನೇತಾಜಿ ಗ್ರಾನೈಟ್​ ಪ್ರತಿಮೆಯನ್ನು ಇಂಡಿಯಾ ಗೇಟ್​ ಬಳಿ ಸ್ಥಾಪಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಟಿಎಂಸಿ ಸೇರಿ ಹಲವು ಪ್ರತಿಪಕ್ಷಗಳು ಸ್ವಾಗತಿಸಿವೆ.


Spread the love

About Laxminews 24x7

Check Also

ಗಟ್ಟಿಯಾಗಿ ಬಿಜೆಪಿಗೆ ವೋಟ್ ಮಾಡಿ, ಕಾಂಗ್ರೆಸ್ಸಿಗರ ಸುಳ್ಳು ವದಂತಿಗಳನ್ನು ನಂಬಬೇಡಿ- ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love  ಬೆಳಗಾವಿಗೆ ಬೆಂಗಳೂರು ಸ್ಥಾನಮಾನಕ್ಕೆ ಪ್ರಯತ್ನ- ಜಗದೀಶ ಶೆಟ್ಟರ್ ಮೂಡಲಗಿಯಲ್ಲಿ ಬಿಜೆಪಿ ಪ್ರಚಾರ ಸಭೆಯಲ್ಲಿ ಶೆಟ್ಟರ್ ಪರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ