Breaking News
Home / new delhi / ಗೆಲುವಿಗಾಗಿ ನೂರೆಂಟು ಸರ್ಕಸ್​.. ಪಂಚರಾಜ್ಯಗಳಲ್ಲಿ ‘ರಾಜಕೀಯ ತಂತ್ರ’ ಹೇಗಿದೆ..?

ಗೆಲುವಿಗಾಗಿ ನೂರೆಂಟು ಸರ್ಕಸ್​.. ಪಂಚರಾಜ್ಯಗಳಲ್ಲಿ ‘ರಾಜಕೀಯ ತಂತ್ರ’ ಹೇಗಿದೆ..?

Spread the love

ಪಂಚರಾಜ್ಯಗಳ ಚುನಾವಣೆ ಬಿಸಿ ಏರ್ತಿದೆ. ಉತ್ತರ ಪ್ರದೇಶದಲ್ಲಿ ಕುರ್ಚಿಯಾಟ ಮುಂದುವರೆದಿದೆ. ಪಂಜಾಬ್​​ನಲ್ಲಿ ಕ್ಯಾಪ್ಟನ್​​ ತನ್ನ ಪಕ್ಷದ ಹುರಿಯಾಳುಗಳನ್ನ ಪ್ರಕಟಿಸಿದ್ದಾರೆ. ಇತ್ತ ಗೋವಾದಲ್ಲಿ ಕಳೆದ ಬಾರಿ ಕೈ ಸುಟ್ಕೊಂಡಿದ್ದ ಕಾಂಗ್ರೆಸ್​, ಈ ಸಲ ಚುನಾವಣೆ ಮುನ್ನವೇ ಆಣೆ ಪ್ರಮಾಣದ ಮೊರೆ ಹೋಗಿದೆ.

ಸಮೀಕ್ಷೆಗಳಿಗೆ ಬೀಳುತ್ತಾ ಬ್ರೇಕ್..?

ವಿವಿಧ ಸುದ್ದಿ ವಾಹಿನಗಳಲ್ಲಿ ಪ್ರಸಾರ ಆಗ್ತಿರುವ ಚುನಾವಣೆ ಸಮೀಕ್ಷೆಗಳಿಗೆ ಬ್ರೇಕ್​ ಹಾಕುವಂತೆ ಸಮಾಜವಾದಿ ಪಕ್ಷ ಆಗ್ರಹಿಸಿದೆ. ಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಅಂತ ಹೇಳಿದೆ. ಈ ಬಗ್ಗೆ ಚುನಾವಣೆ ಆಯೋಗಕ್ಕೆ ಪತ್ರ ಬರೆದಿರುವ ಉತ್ತರ ಪ್ರದೇಶ ಎಸ್​ಪಿ ರಾಜ್ಯಾಧ್ಯಕ್ಷ ನರೇಶ್​ ಉತ್ತಮ್​, ಜನಮತ ಸಮೀಕ್ಷೆಗಳು ಜನರ ಮನಸ್ಸಿನಲ್ಲಿ ಗೊಂದಲ ಮೂಡಿಸುತ್ತವೆ ಅಂತ ಹೇಳಿದೆ.

ಪಕ್ಷಾಂತರ ಪರ್ವ
ಸಮಾಜವಾದಿ ಪಕ್ಷದ ಪ್ರಭಾವಿ ನಾಯಕ ಅಜಂಖಾನ್​​​​, ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ತಮಗೆ ಜಾಮೀನು ನೀಡಬೇಕು ಅಂತ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಇದೇ ವೇಳೆ, ಪ್ರಚಾರ ಕಾರ್ಯಗಳಲ್ಲಿ ತಾವು ಪಾಲ್ಗೊಳ್ಳಲು ಸಾಧ್ಯವಾಗದಂತೆ ಬಿಜೆಪಿ ಯತ್ನಿಸ್ತಿದೆ ಅಂತ ಆರೋಪಿಸಿದ್ದಾರೆ.
ಇನ್ನೊಂದ್ಕಡೆ, ಉತ್ತರ ಪ್ರದೇಶದಲ್ಲಿ ಪಕ್ಷಾಂತರ ಪರ್ವ ಮುಂದುವರೆದಿದೆ. ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಮತ್ತೋರ್ವ ಬಿಜೆಪಿ ಶಾಸಕ ಪಕ್ಷಕ್ಕೆ ಗುಡ್ ಬೈ ಹೇಳಿ ಸಮಾಜವಾದಿ ಪಕ್ಷ ಸೇರ್ಪಡೆ ಆಗಿದ್ದಾರೆ. ಈ ಬಾರಿ ಟಿಕೆಟ್​​ ನಿರಾಕರಿಸಿದ್ದ ಬಿಜೆಪಿ ನಡೆಯಿಂದ ಆಗ್ರಾದ ಫತೇಹಾಬಾದ್ ಬಿಜೆಪಿ ಶಾಸಕ ಜಿತೇಂದ್ರ ವರ್ಮಾ ಪಕ್ಷ ತೊರೆದಿದ್ದಾರೆ.


Spread the love

About Laxminews 24x7

Check Also

3ನೇ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಅಲ್ಪಸಂಖ್ಯಾತರನ್ನು ಮುಗಿಸುತ್ತಾರೆ: ಸಚಿವ ಜಮೀರ್ ಅಹ್ಮದ್‌

Spread the loveಇದು ದೇಶ ಬಚಾವ್ ಎಲೆಕ್ಷನ್. ಬಿಜೆಪಿ ಒಳಗೆ ಒಂದು ರೋಗ ಇದೆ, ಬಿಜೆಪಿ ಎಂದರೆ ಕ್ಯಾನ್ಸರ್ ಇದ್ದಂತೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ