Breaking News

ಶಿವಮೊಗ್ಗ: ವೇಗವಾಗಿ ಬಂದ ಟಿಪ್ಪರ್ ಕಾರಿಗೆ ಡಿಕ್ಕಿ! ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

Spread the love

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ ಬಳಿ ಭೀಕರ ಅಪಘಾತ (Accident) ನಡೆದಿದೆ. ವೇಗವಾಗಿ ಬಂದ ಟಿಪ್ಪರ್ ಡಿವೈಡರ್​ಗೆ ಗುದ್ದಿ ಕಾರಿಗೆ (Car) ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಷಣ್ಣುಗ್ (39) ಮತ್ತು ರಾಮಚಂದ್ರ (40) ಎಂಬುವವರು ಭೀಕರ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ವೇಗವಾಗಿ ಬಂದ ಚಾಲಕನ ಎಡವಟ್ಟಿನಿಂದ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಘಟನೆ ಬಳಿಕ ಟಿಪ್ಪರ್ ಗಾಡಿಯನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಎಸ್ಕೇಪ್ ಆಗಿದ್ದಾನೆ.

ಅಪಘಾತದಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಮೃತ ದುರ್ದೈವಿಗಳು ಭದ್ರಾವತಿ ನಗರದ ನಿವಾಸಿಗಳಾಗಿದ್ದು, ಭದ್ರಾವತಿಯಿಂದ ತೀರ್ಥಹಳ್ಳಿಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಘಟನೆ ನಡೆದಿದೆ. ಸದ್ಯ ಸ್ಥಳಕ್ಕೆ ಪೇಪರ್ ಟೌನ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಪ್ರಧಾನಿ ಮೋದಿ ಒಂದು ದಿನ ತಮ್ಮ ಕೃತ್ಯಗಳಿಗೆ ಪಶ್ಚಾತ್ತಾಪ ಪಡುತ್ತಾರೆ: ಮಲ್ಲಿಕಾರ್ಜುನ ಖರ್ಗೆ

Spread the loveಕಲಬುರಗಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುವಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ