Breaking News

ಬಿಜೆಪಿಗೆ ಬಹುಮತ ಸಿಕ್ಕರೆ ನಾನೇ ಮುಖ್ಯಮಂತ್ರಿ ಆಗ್ತೀನಿ ಅಂತ ನಾನೂ ಹೇಳ್ತೀನಿ,’ :”ಎಂದ ಯತ್ನಾಳ್

Spread the love

ಬಿಜೆಪಿ ಪುನಃ ಸರ್ಕಾರ ರಚಿಸಬೇಕಾದರೆ, ಜೆಡಿ(ಎಸ್) ನೆರವು ಅನಿವಾರ್ಯವೇ ಎಂದು ಕೇಳಿದಾಗ, ಕುಮಾರಸ್ವಾಮಿಯವರ ಜಗಳ ಡಿಕೆ ಶಿವಕುಮಾರ ಜೊತೆ ಇದೆ, ನಮ್ಮೊಂದಿಗಿಲ್ಲ. ಆದಾಗ್ಯೂ, ಬಿಜೆಪಿಗೆ ಪೂರ್ಣ ಬಹುಮತ ಸಿಗುತ್ತದೆ. ಯಾರ ನೆರವೂ ಬೇಕಾಗುವುದಿಲ್ಲ ಎಂದು ಯತ್ನಾಳ್ ಹೇಳಿದರು.

ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ (Basangoda Patil Yatnal) ಆವರು ಗುರುವಾರ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತಿಗೆ ಸಿಕ್ಕರು. ಸ್ವಾಭಾವಿಕವಾಗಿಯೇ, ಕಾಂಗ್ರೆಸ್ ಪಕ್ಷದಿಂದ ಹೊರಬರುವ ನಿರ್ಧಾರ ಮಾಡಿಡರುವ ಸಿ ಎಂ ಇಬ್ರಾಹಿಂ (CM Ibarahim) ಅವರ ಕುರಿತೇ ಅವರಿಗೆ ಕೇಳಿದ ಮೊದಲ ಪ್ರಶ್ನೆಯಾಗಿತ್ತು. ಅದಕ್ಕೆ ಹಾಸ್ಯದ ಧಾಟಿಯಲ್ಲಿ ಉತ್ತರಿಸಿದ ಯತ್ನಾಳ್, ಇಬ್ರಾಹಿಂ ಮತ್ತು ಕಾಂಗ್ರೆಸ್ ನಡುವೆ ಏನು ನಡೆಯುತ್ತಿದೆ ಅಂತ ಗೊತ್ತಿಲ್ಲ. ಇಬ್ರಾಹಿಂ ಅವರು ಯಾವಾಗ ದೇವೇಗೌಡರಿಗೆ (Devegowda) ಅಪ್ಪ ಅನ್ನುತ್ತಾರೋ, ಯಾವಾಗ ಸಿದ್ದರಾಮಯ್ಯನವರಿಗೆ ಅಣ್ಣಾ ಅನ್ನುತ್ತಾರೋ ಯಾರಿಗೂ ಗೊತ್ತಿಲ್ಲ, ರಾಜಕೀಯದಲ್ಲಿ ಅಪ್ಪ, ಅಣ್ಣ ಅನ್ನುವವರು ಬಹಳ ಡೇಂಜರ್ ಎಂದರು. ಮುಂಬರುವ ವಿಧಾನ ಸಭಾ ಚುನಾವಣೆಯ ಬಳಿಕ, ಜೆಡಿ(ಎಸ್) ಪಕ್ಷವನ್ನು ಬಿಟ್ಟು ಯಾವ ಪಕ್ಷವೂ ಸರ್ಕಾರ ರಚಿಸುವುದು ಸಾಧ್ಯವಿಲ್ಲ ಅಂತ ಕುಮಾರಸ್ವಾಮಿಯವರು ಹೇಳಿದ್ದಾರೆ ಅಂತ ಕೇಳಿದಾಗ, ಅವರಿಗೆ ಅನಿಸಿದ್ದು ಹೇಳಲು ಸ್ವತಂತ್ರರು ಅಂತ ಹೇಳಿದ ಅವರು, ‘ಬಿಜೆಪಿಗೆ ಬಹುಮತ ಸಿಕ್ಕರೆ ನಾನೇ ಮುಖ್ಯಮಂತ್ರಿ ಆಗ್ತೀನಿ ಅಂತ ನಾನೂ ಹೇಳ್ತೀನಿ,’ ಎಂದು ನಗಾಡಿದರು.


Spread the love

About Laxminews 24x7

Check Also

ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡಲ್ಲ: ತಿರುವಾಂಕೂರು ದೇವಸ್ವಂ ಮಂಡಳಿ ನಿರ್ಣಯ

Spread the loveತಿರುವಂತಪುರ: ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ  ಮಹಿಳೆಯರಿಗೆ ಅವಕಾಶ ನೀಡುವುದಿಲ್ಲ ಎಂದು ತಿರುವಾಂಕೂರು ದೇವಸ್ವಂ ಮಂಡಳಿ (TDB) ಮಹತ್ವದ ನಿರ್ಣಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ