Breaking News

ಭಾರತೀಯ ಜನತಾ ಪಕ್ಷದ ವರಿಷ್ಠರು ರಾಜ್ಯ ಮತ್ತು ರಾಷ್ಟ್ರಮಟ್ಟದ ನಾಯಕರು ಎಲ್ಲವನ್ನೂ ಗಮನಿಸುತ್ತಿರುತ್ತಾರೆ.

Spread the love

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹೊಸಟ್ಟಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಥಣಿ ಶಾಸಕ ಮಹೇಶ ಕುಮಠಳ್ಳಿ ಅವರು ಬೆಳಗಾವಿಯ ಉಮೇಶ್ ಕತ್ತಿ ಮನೆಯ ಸಭೆ ಮತ್ತು ಸಿಎಮ್ ಗೆ ನಿಯೋಗ ಭೇಟಿ ವಿಚಾರ ನಡೆದಿದೆ. ಭಾರತೀಯ ಜನತಾ ಪಕ್ಷದ ವರಿಷ್ಠರು ರಾಜ್ಯ ಮತ್ತು ರಾಷ್ಟ್ರಮಟ್ಟದ ನಾಯಕರು ಎಲ್ಲವನ್ನೂ ಗಮನಿಸುತ್ತಿರುತ್ತಾರೆ. ನಾನು ಮಾಧ್ಯಮಗಳಿಗೆ ವಿನಂತಿಮಾಡುತ್ತೇನೆ. ಊಹಾಪೆÇೀಹಗಳಿಗೆ ತೆರೆ ಎಳೆಯಿರಿ. ಸಣ್ಣಪುಟ್ಟ ಭಿನ್ನಾಭಿಪ್ರಾಯ ಇದ್ದರೆ ವರಿಷ್ಠರು ಬಗೆಹರಿಸುತ್ತಾರೆ.

ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಸಭೆ ನಡೆಸಿದ್ದಾರೆ ಅಂದು ನಾನು ಬೆಂಗಳೂರಿನಲ್ಲಿ ಇದ್ದ ಕಾರಣದಿಂದ ಬರಲಾಗಿಲ್ಲ. ಜಿಲ್ಲೆಯ ನಾಯಕರಲ್ಲಿ ಭಿನ್ನಾಭಿಪ್ರಾಯಗಳಿರಬಹುದು. ಆದರೆ ವೈಮನಸ್ಸು ಇಲ್ಲ. ಪಕ್ಷವೆಂದರೆ ಒಂದು ಕುಟುಂಬವಿದ್ದಂತೆ. ಪಕ್ಷದ ವರಿಷ್ಠರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಅಸಮಾಧಾನ ಸರಿಪಡಿಸುತ್ತಾರೆ.
ಭಾರತೀಯ ಜನತಾ ಪಕ್ಷದ ವರಿಷ್ಠರು ರಾಜ್ಯ ಮತ್ತು ರಾಷ್ಟ್ರಮಟ್ಟದ ನಾಯಕರು ಎಲ್ಲವನ್ನೂ ಗಮನಿಸುತ್ತಿರುತ್ತಾರೆ. ಅವರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇದ್ದರೆ ಅವರೆ ಬಗೆಹರಿಸಿಕೊಳ್ಳುತ್ತಾರೆ ಎಂದರು


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ