Breaking News

ನೈಟ್ ಕರ್ಫ್ಯೂ ನಿರ್ಬಂಧ ಸಡಿಲಿಕೆ ಬಗ್ಗೆ ನಿರ್ಧಾರ: ಇಂದು ಸಿಎಂ ಹೈವೋಲ್ಟೇಜ್ ಮೀಟಿಂಗ್

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹೆಚ್ಚಾಗಿದ್ದರೂ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣ ಕಡಿಮೆ ಇರುವುದರಿಂದ ರಾಜ್ಯದಲ್ಲಿ ನಿರ್ಬಂಧ ಸಡಿಲಿಕೆಗೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.

 

ಶೇಕಡ 50 ರ ಮಿತಿ ನಿರ್ಬಂಧ ಸಡಿಲಿಕೆ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಗುವುದು. ಇದರೊಂದಿಗೆ ನೈಟ್ ಕರ್ಫ್ಯೂ ಸಮಯ ಬದಲಾವಣೆ, ಕರ್ಫ್ಯೂ ಮುಂದುವರಿಕೆ, ಬೆಂಗಳೂರಿನಲ್ಲಿ 1 ರಿಂದ 9ನೇ ತರಗತಿ ಆರಂಭ ಮೊದಲಾದ ವಿಚಾರಗಳ ಬಗ್ಗೆ ಚರ್ಚೆ ನಡೆಸಿ ತೀರ್ಮಾನಿಸುವ ಸಾಧ್ಯತೆ ಇದೆ.

ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಬೆಂಗಳೂರಿನಲ್ಲಿ ಶಾಲೆ ತೆರೆಯಲು ಶಿಫಾರಸು ಮಾಡಿದ್ದು, ಈ ಬಗ್ಗೆ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು. ಈಜುಕೊಳ, ಜಿಮ್, ಹೋಟೆಲ್, ಬಾರ್, ರೆಸ್ಟೋರೆಂಟ್, ಸಭಾಂಗಣಗಳಲ್ಲಿ ಶೇಕಡ 50 ರ ಮಿತಿ ಸಡಿಲಿಕೆ ಬಗ್ಗೆಯೂ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ನೈಟ್ ಕರ್ಫ್ಯೂ ಮುಂದುವರಿಕೆ ಇಲ್ಲವೇ ಸಮಯ ಬದಲಾವಣೆಯ ಬಗ್ಗೆಯೂ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಲೋಕಾ ಇನ್ಸ್​ಪೆಕ್ಟರ್​ ಸಜೀವ ದಹನ

Spread the loveಧಾರವಾಡ: ರಸ್ತೆ ಡಿವೈಡರ್​ಗೆ ಡಿಕ್ಕಿ ಹೊಡೆದು ಕಾರು ಧಗಧಗ ಹೊತ್ತಿ ಉರಿದ ಹಿನ್ನೆಲೆಯಲ್ಲಿ ಹಾವೇರಿ ಲೋಕಾಯುಕ್ತ ಇನ್ಸ್​ಪೆಕ್ಟರ್ ಸಜೀವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ