Breaking News

IPS ರವಿ ಡಿ. ಚೆನ್ನಣ್ಣನವರ್ ವರ್ಗಾವಣೆ ಆದೇಶಕ್ಕೆ ತಡೆ ನೀಡಿದ ರಾಜ್ಯ ಸರ್ಕಾರ

Spread the love

ಬೆಂಗಳೂರು : ಐಪಿಎಸ್ ಅಧಿಕಾರಿ ರವಿ.ಡಿ.ಚೆನ್ನಣ್ಣನವರ್ ರನ್ನು ವಾಲ್ಮೀಕಿ ಬುಡಕಟ್ಟು ನಿಗಮದ ಎಂಡಿ ಆಗಿ ವರ್ಗಾಯಿಸಿದ್ದ ರಾಜ್ಯ ಸರ್ಕಾರ ಇದೀಗ ಆದೇಶಕ್ಕೆ ತಡೆ ಹಿಡಿದಿದೆ.

ರಾಜ್ಯ ಸರ್ಕಾರವು ಜನವರಿ 26 ರಂದು ರವಿ ಡಿ.ಚೆನ್ನಣ್ಣನವರ್ ಸೇರಿ ಒಟ್ಟು 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು.

ರವಿ.ಡಿ.ಚೆನ್ನಣ್ಣನವರ್ ಸಿಐಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ಸರ್ಕಾರ ರವಿ. ಡಿ.ಚೆನ್ನಣ್ಣನವರ್ ರನ್ನು ವಾಲ್ಮೀಕಿ ಬುಡಕಟ್ಟು ನಿಗಮದ ಎಂಡಿ ಆಗಿ ವರ್ಗಾವಣೆ ಮಾಡಿತ್ತು.

 

ರವಿ ಚೆನ್ನಣ್ಣನವರ್ ಸೇರಿದಂತೆ ಕೆಲ ಪೊಲೀಸ್ ಅಧಿಕಾರಿಗಳ ವಿರುದ್ಧ ಗ್ರಾನೈಟ್ ಉದ್ಯಮಿಯೊಬ್ಬರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದು. ಬಳಿಕ ರವಿ ಡಿ.ಚೆನ್ನಣ್ಣನವರ್ ರನ್ನು ವಾಲ್ಮೀಕಿ ಬುಡಕಟ್ಟ ನಿಗಮದ ಎಂಡಿ ಆಗಿ ವರ್ಗಾಯಿಸಿದ್ದ ಆದೇಶಕ್ಕೆ ರಾಜ್ಯ ಸರ್ಕಾರ ತಡೆ ಹಿಡಿದಿದೆ.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ