Breaking News

ಕರ್ನಾಟಕ ರತ್ನ ಅಪ್ಪು ಅಗಲಿ 3 ತಿಂಗಳು..ಸಸಿ ನೆಟ್ಟು ಭಾವುಕರಾದ ರಾಘಣ್ಣ

Spread the love

ಬೆಂಗಳೂರು: ಪವರ್​ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಇಂದಿಗೆ ಮೂರು ತಿಂಗಳು ಕಳೆದಿದೆ. ಕಳೆದ ವರ್ಷ ಅಕ್ಟೋಬರ್ 29 ರಂದು ಹೃದಯಾಘಾತದಿಂದ ಪುನೀತ್​ ರಾಜ್​ ಕುಮಾರ್​ ಇಹಲೋಕ ತ್ಯಜಿಸಿದ್ದರು. ಪುನೀತ್​ ರಾಜ್​ ಕುಮಾರ್​ ನಿಧನರಾಗಿ ಮೂರು ತಿಂಗಳು ಕಳೆದ ಹಿನ್ನೆಲೆ, ಪುನೀತ್ ಸಮಾಧಿ ಬಳಿ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ.

 

ಸಮಾಧಿ ಬಳಿ ಅಶ್ವಿನಿ ಪುನೀತ್​ ರಾಜ್​ಕುಮಾರ್,​ ಪುತ್ರಿ ಧೃತಿ , ರಾಘವೇಂದ್ರ ರಾಜ್ ಕುಮಾರ್ ಮತ್ತು ಅವರ ಪತ್ನಿ ಹಾಗೂ ವಿಜಯ್ ರಾಘವೇಂದ್ರ, ಧೀರೇನ್​ ರಾಮ್ ಕುಮಾರ್, ಪುನೀತ್ ಸಹೋದರಿ ಲಕ್ಷ್ಮೀ ಹಾಗೂ ಎಸ್.ಎ.ಗೋವಿಂದ್​ ರಾಜು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

ಸಮಾಧಿ ಬಳಿ ಪುನೀತ್ ರಾಜ್ ಕುಮಾರ್ ಅವರಿಗೆ ಇಷ್ಟವಾದ ತಿಂಡಿಗಳನಿಟ್ಟು ಕುಟುಂಬಸ್ಥರು ನಮನ ಸಲ್ಲಿಸಿದ್ದಾರೆ. ಪೂಜೆ ಬಳಿಕ ಅಶ್ವಿನಿ ಪುನೀತ್ ರಾಜ್ ಕುಮಾರ್, ಅಭಿಮಾನಿಗಳಿಗೆ ಬಾದಾಮಿ, ಸೀಬೆ, ಮಾವು, ತೇಗ, ಹಲಸಿನ ಸಸಿಗಳನ್ನು ವಿತರಿಸಿದ್ದಾರೆ.

ಇನ್ನು ಸಮಾಧಿ ಅವರಣದಲ್ಲಿ, ರಾಘವೇಂದ್ರ ರಾಜ್ ಕುಮಾರ್ ಗಿಡ ನೆಟ್ಟ ಅಪ್ಪು ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಇನ್ನು ಅಪ್ಪು ಮೂರನೇ ತಿಂಗಳ ಕಾರ್ಯಕ್ಕೆ ಸಹೋದರ ಡಾ.ಶಿವರಾಜ್​ಕುಮಾರ್​, ಮೈಸೂರಿನಲ್ಲಿ ವೇದ ಚಿತ್ರದ ಶೂಟಿಂಗ್​ನಲ್ಲಿ ಬ್ಯುಸಿಯಾಗಿರುವ ಕಾರಣ, ಸಮಾಧಿ ಬಳಿ ಬರಲು ಸಾಧ್ಯವಾಗಿಲ್ಲ.


Spread the love

About Laxminews 24x7

Check Also

ರೈತರು ಖಾಸಗಿ ಮಾರುಕಟ್ಟೆಯಲ್ಲಿದ್ದ ವರ್ತಕರು ಠೇವಣಿ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ?

Spread the loveಬೆಳಗಾವಿ ಜೈ ಕಿಸಾನ್ ಖಾಸಗಿ ಮಾರುಕಟ್ಟೆಯಲ್ಲಿ ಕಳೆದ ಸುಮಾರು ವರ್ಷಗಳಿಂದ ಬೆಳಗಾವಿ ನಗರದ ಗೋವನ್ ಡಿಸ್ಟ್ರಿಕ್ಟ್ ವೆಜಿಟೆಬಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ