Breaking News
Home / ನವದೆಹಲಿ / ಭಾರತದಲ್ಲಿ ಕೊರೋನಾಗೆ ಕಳೆದ 24 ಗಂಟೆಯಲ್ಲಿ 50 ಮಂದಿ ಸಾವು..! 20,000 ಸೋಂಕಿತರು

ಭಾರತದಲ್ಲಿ ಕೊರೋನಾಗೆ ಕಳೆದ 24 ಗಂಟೆಯಲ್ಲಿ 50 ಮಂದಿ ಸಾವು..! 20,000 ಸೋಂಕಿತರು

Spread the love

ನವದೆಹಲಿ/ಮುಂಬೈ,ಏ.22-ವೈದ್ಯರು ಮತ್ತು ಆರೋಗ್ಯರಕ್ಷಕರ ನಿರಂತರ ಹೋರಾಟದ ನಡುವೆಯೂ ದೇಶಾದ್ಯಂತ ಕೊರೊನಾ ವೈರಸ್ ಅಟ್ಟಹಾಸ ಮತ್ತಷ್ಟು ತೀವ್ರಗೊಂಡಿದೆ. ಸಾವು ಮತ್ತು ಸೋಂಕು ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ಮುಂದೇನು ಎಂಬ ಆತಂಕ 135 ಕೋಟಿ ಭಾರತೀಯರಲ್ಲಿ ಮನೆ ಮಾಡಿದೆ. ಭಾರತದಲ್ಲಿ ಮೃತರ ಸಂಖ್ಯೆ 650ಕ್ಕೇರಿರುವುದು ಆತಂಕಕಾರಿಯಾಗಿದೆ. ಮತ್ತೊಂದಡೆ 20,000ಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವೂ ಇದೆ.

ಕೇಂದ್ರ ಆರೋಗ್ಯ ಸಚಿವಾಲಯದ ನಿನ್ನೆ ಮಧ್ಯರಾತ್ರಿವರೆಗಿನ ಅಧಿಕೃತ ವರದಿ ಪ್ರಕಾರ, ಡೆಡ್ಲಿ ವೈರಸ್ ಈವರೆಗೆ ದೇಶಾದ್ಯಂತ 640 ಜನರನ್ನು ಬಲಿ ಪಡೆದಿದ್ದು, ಸೋಂಕಿತರ ಸಂಖ್ಯೆ 19,984ಕ್ಕೇರಿದೆ. ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 15,574 ಈವರೆಗೆ 3,869 ಮಂದಿ ಗುಣಮುಖರಾಗಿ ಮನೆಗಳಿಗೆ ಮರಳಿದ್ದಾರೆ.

ಇಂದು ಬೆಳಗ್ಗೆ ಗುಜರಾತ್ (ಐದು ಸಾವು) ಕೆಲವು ರಾಜ್ಯಗಳಲ್ಲಿ ಸಾವು ಪ್ರಕರಣಗಳು ವರದಿಯಾಗಿದೆ. ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ತಾನ ಮತ್ತಿತರ ರಾಜ್ಯಗಳಲ್ಲಿ ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಕಳೆದ 24 ತಾಸುಗಳ ಅವಧಿಯಲ್ಲಿ ಒಟ್ಟು 50 ಮಂದಿಯನ್ನು ಕೊರೊನಾ ಬಲಿ ಪಡೆದಿದೆ.ನಿನ್ನೆ ಸಂಜೆಯಿಂದ ಇಂದು ನಸುಕಿನವರೆಗಿನ ಮಾಹಿತಿ ಪ್ರಕಾರ ಒಟ್ಟು 37 ಸಾವುಗಳು ಸಂಭವಿಸಿದೆ. ಮಹಾರಾಸ್ಟ್ರದಲ್ಲಿ 19, ಗುಜರಾತ್ 13, ಪಶ್ಚಿಮ ಬಂಗಾಳ 3 ಹಾಗೂ ಜಾರ್ಖಂಡ್ ಮತ್ತು ತಮಿಳುನಾಡಿನಲ್ಲಿ ತಲಾ ಒಬ್ಬರು ಬಲಿಯಾಗಿದ್ದಾರೆ.

ಈವರೆಗೆ ಸಂಭವಿಸಿರುವ 640 ಸಾವು ಪ್ರಕರಣಗಳಲ್ಲಿ, ಮಹಾರಾಷ್ಟ್ರ ಪ್ರಥಮ ಸ್ಥಾನದಲ್ಲಿದೆ. ಆ ರಾಜ್ಯದಲ್ಲಿ ಒಟ್ಟು 251 ಸಾವುಗಳು ವರದಿಯಾಗಿವೆ. ನಂತರದ ಸ್ಥಾನಗಳಲ್ಲಿ ಗುಜರಾತ್ (90), ಮಧ್ಯಪ್ರದೇಶ(76), ದೆಹಲಿ (47), ರಾಜಸ್ತಾನ(25), ತೆಲಂಗಾಣ(23), ಆಂಧ್ರಪ್ರದೇಶ (22), ಉತ್ತರ ಪ್ರದೇಶ (20), ತಮಿಳುನಾಡು (18), ಕರ್ನಾಟಕ (17), , ಪಂಜÁಬ್ (16), ಪಶ್ಚಿಮ ಬಂಗಾಳದಲ್ಲಿ (15) ರಾಜ್ಯಗಳಿವೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಐದು, ಕೇರಳ ಮತ್ತು ಹರಿಯಾಣ ತಲಾ ಮೂರು, ಜÁರ್ಖಂಡ್ ಮತ್ತು ಬಿಹಾರ ತಲಾ ಎರಡು, ಮೇಘಾಲಯ, ಹಿಮಾಚಲ ಪ್ರದೇಶ, ಒಡಿಶಾ ಮತ್ತು ಅಸ್ಸಾಂ ರಾಜ್ಯಗಳಲ್ಲಿ ತಲಾ ಒಂದೊಂದು ಸಾವುಗಳು ವರದಿಯಾಗಿವೆ. ಮತ್ತೊಂದು ಮೂಲಗಳ ಪ್ರಕಾರ ಈವರೆಗೆ ದೇಶದ ವಿವಿಧೆಡೆ 660 ಸಾವುಗಳು ಸಂಭವಿಸಿವೆ.

ಇನ್ನು ಹಲವು ರಾಜ್ಯಗಳಲ್ಲಿ ಕಳೆದ 12 ತಾಸುಗಳ ಅವಧಿಯಲ್ಲಿ ಹೊಸ ಸೋಂಕು ಮತ್ತು ಸಾವು ಪ್ರಕರಣಗಳು ವರದಿಯಾಗುತ್ತಿರುವುದು ಕಳವಳಕಾರಿಯಾಗಿದೆ. ಗುಜರಾತ್‍ನಲ್ಲಿ ಇಂದು ಬೆಳಗ್ಗೆವರೆಗೆ 94 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಸಾಂಕ್ರಾಮಿಕ ರೋಗ ಪೀಡಿತರ ಸಂಖ್ಯೆ 2273ಕ್ಕೇರಿದೆ.

ಆಂಧ್ರಪ್ರದೇಶದಲ್ಲಿಯೂ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದೆ. ಅಲ್ಲಿ ಹೊಸದಾಗಿ 56 ಪ್ರಕರಣಗಳು ದಾಖಲಾಗಿದ್ದು, ಪಾಸಿಟಿವ್ ಕೇಸ್‍ಗಳ ಸಂಖ್ಯೆ 813ಕ್ಕೇರಿದೆ. ಓಡಿಶಾದ ಭದ್ರಕ್‍ನಲ್ಲಿ ಐದು ಹೊಸ ಪ್ರಕರಣಗಳು ಪತ್ತೆಯಾಗಿವೆ. ಆರೋಗ್ಯ ಕಾರ್ಯಕರ್ತರು, ಪೊಲೀಸರು ಮತ್ತು ಯೋಧರಲ್ಲಿಯೂ ಸೋಂಕು ಪ್ರಕರಣಗಳು ಕಂಡುಬಂದಿರುವುದು ಆತಂಕಕಾರಿಯಾಗಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ