Breaking News

ಬಾಸುಂಡೆ ಬರುವ ರೀತಿ ಹೊಡೆದು ಕ್ಷಮೆ ಕೇಳಿದ ಶಿಕ್ಷಕಿ!

Spread the love

ಕಾರವಾರ: ಕ್ಷುಲ್ಲಕ ವಿಚಾರಕ್ಕೆ ವಿದ್ಯಾರ್ಥಿಗೆ ಬಾಸುಂಡೆ ಬರುವ ರೀತಿ ಶಿಕ್ಷಕಿಯೊಬ್ಬರು ಹೊಡೆದು ದಂಡಿಸಿದ ಘಟನೆ ಹೊನ್ನಾವರ ಪಟ್ಟಣದ ಸರ್ಕಾರಿ‌ ಶಾಲೆಯಲ್ಲಿ ನಡೆದಿದ್ದು ಬೆಳಕಿಗೆ ಬಂದಿದೆ.ಕಲ್ಪನಾ ಹೆಗಡೆ ವಿದ್ಯಾರ್ಥಿಗೆ ಥಳಿಸಿದ ಶಿಕ್ಷಕಿ. ಶಾಲೆಯಲ್ಲಿ ನಡೆದ ಸಣ್ಣ ಪ್ರಮಾದವೊಂದಕ್ಕೆ ಕುಪಿತರಾದ ಶಿಕ್ಷಕಿ ಕಲ್ಪನಾ ಹೆಗಡೆ 6 ನೇ ತರಗತಿ ವಿದ್ಯಾರ್ಥಿಗೆ ಬಾಸುಂಡೆ ಬರುವ ರೀತಿ ಹೊಡೆದು ಗಾಯಗೊಳಿಸಿದ್ದಾರೆ.

ಇನ್ನು ವಿಷಯ ಪಾಲಕರಿಗೆ ತಿಳಿಯುತ್ತಿದ್ದಂತೆ ಶಿಕ್ಷಕಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಪಾಲಕರ ಬಳಿ ಕ್ಷಮೆಯಾಚಿಸಿದ್ದು ಪ್ರಕರಣ ತಣ್ಣಗಾಗಿದೆ. ಈ ಬಗ್ಗೆ ಪೊಲೀಸ್ ದೂರು ದಾಖಲಾಗಿಲ್ಲ. ಆದರೆ, ಪ್ರಕರಣ ತಾಲೂಕಿನಾದ್ಯಂತ ಕಾಳ್ಗಿಚ್ಚಿನಂತೆ ಹಬ್ಬಿದ್ದು, ಶಿಕ್ಷಕಿಯ ವರ್ತನೆಗೆ ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಪತ್ರಕರ್ತರಿಗೆ ತರಬೇತಿ: ಇನ್‌ಫೋಸಿಸ್‌ ಸ್ಪ್ರಿಂಗ್‌ಬೋರ್ಡ್‌-ಕರ್ನಾಟಕ ಮಾಧ್ಯಮ ಅಕಾಡೆಮಿ ಒಡಂಬಡಿಕೆ

Spread the loveಬೆಂಗಳೂರು, (ಸೆಪ್ಟೆಂಬರ್‌ 8): ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಸಮ್ಮುಖದಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ಜಾಗತಿಕ ಮಟ್ಟದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ