Breaking News

ಫೆ.7ರಿಂದ ಬಜೆಟ್‌ ಪೂರ್ವಭಾವಿ ಸಿದ್ಧತೆ- ಇಲಾಖಾವಾರು ಚರ್ಚೆಯ ವೇಳಾಪಟ್ಟಿ ಬಿಡುಗಡೆ

Spread the love

ಬೆಂಗಳೂರು: ಬಜೆಟ್ ಪೂರ್ವಭಾವಿ ಸಿದ್ಧತೆಗಾಗಿ ಫೆ.7 ರಿಂದ ಇಲಾಖಾವಾರು ಚರ್ಚೆಯ ವೇಳಾಪಟ್ಟಿ ನಿಗದಿ ಮಾಡಲಾಗಿದ್ದು, ಫೆ.10 ಮಧ್ಯಾಹ್ನ 12ಕ್ಕೆ ಸಚಿವ ಸಭೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ವಿವಿಧ ಇಲಾಖೆಗಳೊಂದಿಗೆ ಆಯವ್ಯಯ ಪೂರ್ವಭಾವಿ ಸಭೆಗಳನ್ನು ಮುಂದಿನ ವಾರದಿಂದ ನಡೆಸಲಾಗುವುದು. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ದೊರೆಯಲಿರುವ ಸಾಲ ಹಾಗೂ ಅನುದಾನಗಳ ಆಧಾರದ ಮೇಲೆ ರಾಜ್ಯ ಸರ್ಕಾರದ ಆಯವ್ಯಯದ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ನಾಳೆ ದೆಹಲಿ ಪ್ರವಾಸ: ಆಯವ್ಯಯಕ್ಕೂ ಮುನ್ನ ರಾಜ್ಯದ ಎಲ್ಲಾ ಸಂಸದರೊಂದಿಗೆ ಸಭೆ ಸೇರುವ ವಾಡಿಕೆಯಿದೆ. ಈ ಸಭೆಗೆ ಸಮಯ ನಿಗದಿಯಾಗುತ್ತಿದೆ. ಅಂತರರಾಜ್ಯ ಜಲವಿವಾದಗಳಲ್ಲಿ ರಾಜ್ಯವನ್ನು ಪ್ರತಿನಿಧಿಸುವ ವಕೀಲರನ್ನೂ ಭೇಟಿಯಾಗಲಿದ್ದು, ಬಹುತೇಕವಾಗಿ ನಾಳೆ ದೆಹಲಿಗೆ ಪ್ರಯಾಣ ಬೆಳೆಸುವ ಸಾಧ್ಯತೆಗಳಿವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.


Spread the love

About Laxminews 24x7

Check Also

ಗಣಪತಿ ಹಬ್ಬದ ಆಗಮನ — ಗ್ರಾಮೀಣ ಭಾಗದಲ್ಲಿ ಭಕ್ತಿ, ಸಂಭ್ರಮ, ಸಾಂಸ್ಕೃತಿಕ ಚೈತನ್ಯ ಸಾವಳಗಿ

Spread the love ಗಣಪತಿ ಹಬ್ಬದ ಆಗಮನ — ಗ್ರಾಮೀಣ ಭಾಗದಲ್ಲಿ ಭಕ್ತಿ, ಸಂಭ್ರಮ, ಸಾಂಸ್ಕೃತಿಕ ಚೈತನ್ಯ ಸಾವಳಗಿ ರಾಜ್ಯದಾದ್ಯಂತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ