Breaking News

ನಾಲ್ಕು ಸರ್ಕಾರಿ ನೌಕರಿ ಬಿಟ್ಟಿದ್ದ ಜ್ಯೋತಿ ಪಿಎಸ್‌ಐ ಹುದ್ದೆಗೆ ಆಯ್ಕೆ

Spread the love

ಬೈಲಹೊಂಗಲ (ಬೆಳಗಾವಿ ಜಿಲ್ಲೆ): ನಾಲ್ಕು ಸರ್ಕಾರಿ ನೌಕರಿಗಳ ಆದೇಶ ಪತ್ರ ಬಂದಿದ್ದರೂ ನಿರಾಕರಿಸಿದ್ದ ಯುವತಿ, ಎಂಜಿನಿಯರಿಂಗ್‌ ಪದವೀಧರೆ ಜ್ಯೋತಿ ಮಹಾಬಳೇಶ್ವರ ಗೂಳಪ್ಪನವರ ಈಚೆಗೆ ನಡೆದ ಪಿಎಸ್‌ಐ ಹುದ್ದೆಗೆ ನೇಮಕವಾಗಿದ್ದಾರೆ.

ತಾಲ್ಲೂಕಿನ ಉಡಿಕೇರಿ ಗ್ರಾಮದ ಪ್ರಗತಿಪರ ರೈತ ಮಹಾಬಳೇಶ್ವರ ಗೂಳಪ್ಪನವರ ಅವರ ಪುತ್ರಿ ಈ ಸಾಧಕಿ.

ಬರೆದಿರುವ ಪ್ರತಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲೂ ಅವರು ಸೋಲು ಕಂಡಿಲ್ಲ. ಮನೆ ಬಾಗಿಲಿಗೆ ಬಂದಿದ್ದ ನೌಕರಿಗಳ ಆದೇಶ ಪತ್ರಗಳನ್ನು ಒಪ್ಪಿಕೊಳ್ಳದೆ ಉನ್ನತ ಹುದ್ದೆಗೆ ಕಾದಿದ್ದರು; ಪ್ರಯತ್ನ ಮುಂದುವರಿಸಿದ್ದರು. ಈಗ ಪಿಎಸ್‌ಐ ಹುದ್ದೆಗೆ ನೇಮಕವಾಗಿ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪ್ರೊಬೇಷನರಿ ಪಿಎಸ್‌ಐ ಆಗಿ ವರದಿ ಮಾಡಿಕೊಂಡಿದ್ದಾರೆ.

ಐಪಿಎಸ್ ಅಥವಾ ಐಎಎಸ್ ಅಧಿಕಾರಿ ಆಗುವ ಕನಸು ಕಟ್ಟಿಕೊಂಡಿರುವ ಜ್ಯೋತಿಗೆ ಬೆಂಗಳೂರು ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ, ಕರ್ನಾಟಕ ಲೋಕಸೇವಾ ಆಯೋಗದ ಎಫ್‌ಡಿಎ ಮತ್ತು ಎಸ್‌ಡಿಎ ಹುದ್ದೆಗೆ ಆಯ್ಕೆಯಾಗಿದ್ದರು. ಆದರೆ, ಒಪ್ಪಿಕೊಂಡಿರಲಿಲ್ಲ.

‘ಅನುಭವ ಹಾಗೂ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವುದಕ್ಕಾಗಿ ನಾನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುತ್ತಿದ್ದೆ. ಓದುತ್ತಿದ್ದೆ. ಉತ್ತಮ ಫಲಿತಾಂಶವನ್ನೂ ಪಡೆದಿದ್ದೆ. ಆದರೆ, ಅಧಿಕಾರಿ ಆಗಬೇಕು ಎನ್ನುವ ಆಸೆ ಇದ್ದಿದ್ದರಿಂದ ಆ ಕೆಲಸಗಳಿಗೆ ಸೇರಿರಲಿಲ್ಲ. ಪ್ರಯತ್ನವನ್ನು ಮುಂದುವರಿಸಿದ್ದೆ. ಇದು ಪಿಎಸ್‌ಐ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಗಳಿಸಲು ಸಹಕಾರಿಯಾಯಿತು’ ಎನ್ನುತ್ತಾರೆ ಅವರು.

ಉಡಿಕೇರಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1ರಿಂದ 7ನೇ ತರಗತಿವರೆಗೆ ಶಿಕ್ಷಣ ಪಡೆದು, ಪ್ರೌಢಶಾಲಾ ಶಿಕ್ಷಣವನ್ನು ರಾಮಲಿಂಗೇಶ್ವರ ಪ್ರೌಢಶಾಲೆಯಲ್ಲಿ ಪೂರ್ಣಗೊಳಿಸಿದ್ದಾರೆ. ಪಿಯು ಶಿಕ್ಷಣವನ್ನು ಧಾರವಾಡ ಜೆಎಸ್‌ಎಸ್ ಕಾಲೇಜಿನಲ್ಲಿ ಪೂರೈಸಿ, ಕೆಎಲ್‌ಇ ಸಂಸ್ಥೆಯ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಪದವಿ ಪಡೆದಿದ್ದಾರೆ.


Spread the love

About Laxminews 24x7

Check Also

ಬಾಗಲಕೋಟೆ: ಹಳ್ಳಕ್ಕೆ ಬಿದ್ದ ಬಾಲಕ, ಕಾಪಾಡಲು ಹೋದ ಯುವಕ ನೀರುಪಾಲು

Spread the loveಬಾಗಲಕೋಟೆ: ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್​ ತಾಲೂಕಿನ ಚಿಕನಾಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ