Breaking News

ಮದ್ಯ ಸೇವನೆಗೆ ಹಣ ಹೊಂದಿಸಲು ಕಳ್ಳತನ, ಕುಡುಕನ ಬಂಧನ

Spread the love

ಬೆಂಗಳೂರು: ಮದ್ಯ ಸೇವನೆಗಾಗಿ ಹಣ ಸಂಗ್ರಹಿಸಲು ರಾತ್ರೋರಾತ್ರಿ ವಿವಿಧ ಅಂಗಡಿಗಳಲ್ಲಿ ಕಳ್ಳತನ ಮಾಡಿ ನಗದು ದೋಚುತ್ತಿದ್ದ ವ್ಯಕ್ತಿಯನ್ನು ಸುಬ್ರಮಣ್ಯಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಕಾರ್ತಿಕ್ ಎಂಬಾತ ಬಂಧಿತ ಆರೋಪಿ. ಪ್ರಕರಣದ ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.ಈ ಆರೋಪಿಗಳು ಹೊಟೇಲ್​​ಗಳು, ವಿವಿಧ ಮಳಿಗೆಗಳ ಬೀಗ ಹೊಡೆದು ಒಳನುಗ್ಗಿ ಕ್ಷಣಾರ್ಧದಲ್ಲಿ ಅಲ್ಲಿದ್ದ ಹಣ ಎಗರಿಸುತ್ತಿದ್ದರು. ಕಾರ್ತಿಕ್ ಜೊತೆಗೆ ಮತ್ತೊಬ್ಬ ಆರೋಪಿ ಕುಡಿತದ ಚಟಕ್ಕೆ ಬಿದ್ದಿದ್ದ. ಇಬ್ಬರೂ ಸುಲಭವಾಗಿ ಹಣ ಮಾಡುವ ಗೀಳಿಗೆ ಬಿದ್ದಿದ್ದರು. ಕಳ್ಳತನದ ಹಣದಲ್ಲಿ ಮದ್ಯ ಭರಪೂರ ಸೇವಿಸುತ್ತಿದ್ದರು. ಬೈಕ್ ಕದ್ದು ಅದೇ ಬೈಕ್​ನಲ್ಲಿ ಸಂಚರಿಸಿ ಅಂಗಡಿಗಳಿಗೆ ನುಗ್ಗಿ ಹಣ, ಬೆಳ್ಳಿಯ ವಸ್ತುಗಳನ್ನು ಹೊತ್ತೊಯ್ಯುತ್ತಿದ್ದರು.


Spread the love

About Laxminews 24x7

Check Also

ಗ್ಯಾರಂಟಿ’ಗಳಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ನಿಜ, ಆದರೆ ಅಭಿವೃದ್ಧಿ ಕಾರ್ಯ ನಿಂತಿಲ್ಲ: ಸತೀಶ್ ಜಾರಕಿಹೊಳಿ

Spread the loveಬೆಳಗಾವಿ: ಗ್ಯಾರಂಟಿ ಯೋಜನೆಗಳ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವ ಎಂ.ಬಿ.ಪಾಟೀಲ್‌ ಅಪಸ್ವರ ಎತ್ತಿದ ಬೆನ್ನಲ್ಲೇ ಲೋಕೋಪಯೋಗಿ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ