Breaking News

ಡೆಡ್ ಎಂಡ್ ಮಾತ್ರ ಇರುವುದು ಎಂದು ಕಾಂಗ್ರೆಸ್ ಗೆ ಹೇಳಿದ್ದೇನೆ: ಸಿಎಂ

Spread the love

ಬೆಂಗಳೂರು: ಕಾಂಗ್ರೆಸ್ ನವರು ಕೇಸರಿ ಧ್ವಜ ಹೇಳಿಕೆ ಕುರಿತು ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದು, ಲಾಜಿಕಲ್ ಎಂಡ್ ಮಾಡುತ್ತೇವೆ ಅಂದಿದ್ದಾರೆ,ಆದರೆ ನಾನು ಇರುವುದು ಕೇವಲ ಡೆಡ್ ಎಂಡ್ ಮಾತ್ರ ಎಂದು ಹೇಳಿದ್ದೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅವರ ಧೋರಣೆ ಅರ್ಥವಾಗ್ತಿಲ್ಲ.ಜನಪರ ವಿಚಾರ ರೈತ ವಿಚಾರ ರಾಜ್ಯದ ಹಿತದೃಷ್ಟಿಯಿಂದ ಧರಣಿ ಗಳು ಆಗಿರೋದನ್ನ ನೋಡಿದ್ದೆವು. ಆದರೆ ಈಗ ಯಾವುದೋ ಒಂದು ಸ್ಟೇಟ್ಮೆಂಟ್ ಇಟ್ಟಿಕೊಂಡು ಧರಣಿ‌ ಮಾಡ್ತಿದ್ದಾರೆ. ಅದು ಈಶ್ವರಪ್ಪನವರ ಮಾತನ್ನ ತಪ್ಪಾಗಿ ಅರ್ಥೈಸಿಕೊಂಡು ಧರಣಿ ಮಾಡ್ತಿದ್ದಾರೆ. ಈಶ್ವರಪ್ಪನವರ ಹೇಳಿಕೆಯಲ್ಲಿ ಯಾವುದೇ ತಪ್ಪು ಇಲ್ಲ ಕಾನೂನು ವಿರೋಧ ಅಂಶವಿಲ್ಲ ಎಂದರು.

ಅವರಿಗೆ ಯಾವುದೇ ಬೇರೆ ವಿಷಯಗಳು ಇಲ್ಲದೇ ಇರುವುದರಿಂದ ಈ ಧರಣಿ ಮಾಡ್ತಿದ್ದಾರೆ. ಜವಾಬ್ದಾರಿಯ ವಿರೋಧ ಪಕ್ಷದ ಮಾಡುವಂತದ್ದಲ್ಲ.ವಿರೋಧ ಪಕ್ಷ ಸಂಪೂರ್ಣವಾಗಿ ಜವಾಬ್ದಾರಿ ಮರೆತಿದೆ.ಇದು ಅವರಿಗೆ ರಾಜಕೀಯವಾಗಿ ಹೆಚ್ಚಿನು ಕ್ರೇಡಿಬಿಲಿಟಿ ಸಿಗಲ್ಲ.ಸದ್ಯ ಉದ್ಬವಿಸಿರುವ ಹಿಜಾಬ್ ಗೊಂದಲ ಬಗೆಹರಿಸಬೇಕು ಅಂತ ಸರ್ಕಾರ ಕೆಲಸ ಮಾಡುತ್ತಿದ್ದರೆ, ವಿದ್ಯಾರ್ಥಿಗಳಿಗೆ ಪರೀಕ್ಷೆ ಹತ್ತಿರ ಬರ್ತಿದೆ ಇದನ್ನ ಬಗೆಹರಿಸಬೇಕು ಅಂತ ನಾವಿದ್ದೇವೆ. ಇದಕ್ಕೆ ಸಹಕಾರಿಯಾಗಿ ಕೆಲಸ ಮಾಡಬೇಕು ಅನ್ನೋದು ಬಿಟ್ಟು ಧರಣಿ ಮಾಡುತ್ತಿದೆ ಎಂದು ಆಕ್ರೋಶ ಹೋರ ಹಾಕಿದರು.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ