Breaking News

ಹೆಣ್ಣುಮಕ್ಕಳ ಶಿಕ್ಷಣದ ಕುರಿತು ಬಿಜೆಪಿ ನಿಲುವೇನು: ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

Spread the love

ಬೆಂಗಳೂರು: ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗುವಂತೆ ರಾಜ್ಯದ ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಇಲಾಖೆ ಕಾರ್ಯದರ್ಶಿಗಳು ಹೊರಡಿಸಿರುವ ಸುತ್ತೋಲೆಯನ್ನು ಸರ್ಕಾರ ಹಿಂಪಡೆಯಬೇಕು ಎಂದು ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಹಾಗೆಯೇ, ಹೆಣ್ಣು ಮಕ್ಕಳ ಶಿಕ್ಷಣದ ವಿಚಾರದಲ್ಲಿ ಬಿಜೆಪಿಯ ನಿಲುವು ಏನು ಎಂಬುದನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ ತಿಳಿಸಬೇಕು ಎಂದು ಕೇಳಿದ್ದಾರೆ.

ಸುತ್ತೋಲೆಗೆ ಸಂಬಂಧಿಸಿದಂತೆ #HijabCircular ಟ್ಯಾಗ್ ಬಳಸಿ ಸರಣಿ ಟ್ವೀಟ್‌ಗಳನ್ನು ಮಾಡಿರುವ ಸಿದ್ದರಾಮಯ್ಯ, ‘ರಾಜ್ಯದ ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಇಲಾಖೆ ಕಾರ್ಯದರ್ಶಿಗಳು ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗುವಂತೆ ಹೊರಡಿಸಿರುವ ಸುತ್ತೋಲೆಯನ್ನು ಕೂಡಲೇ ಹಿಂಪಡೆದು, ನ್ಯಾಯಾಲಯದ ಆದೇಶ ಪಾಲನೆ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ’ ಎಂದು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಸಿಗರೇಟ್ ಸೇದಿರುವ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್ – ಬಾಲಕನಿಂದ 120 ಗ್ರಾಂ ಚಿನ್ನ ಲೂಟಿ

Spread the loveಕೊಪ್ಪಳ: ಅಪ್ರಾಪ್ತ ಬಾಲಕನಿಗೆ ಸಿಗರೇಟ್ ಸೇದುವುದನ್ನು ಕಲಿಸಿ, ಅದರ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ಮಾಡಿ ಸುಮಾರು 120 ಗ್ರಾಂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ