Breaking News

ನೀರು ಕುಡಿಯಲು ಬಂದ ಜಿಂಕೆ ಹೊತ್ತೊಯ್ದ ಮೊಸಳೆ; ದಾಂಡೇಲಿಯಲ್ಲಿ ಮತ್ತೆ ಆತಂಕದ ಛಾಯೆ

Spread the love

ಕಾರವಾರ: ಕಾಳಿನದಿಯಲ್ಲಿ ನೀರು ಕುಡಿಯಲು ಬಂದ ಜಿಂಕೆವೊಂದನ್ನು ಮೊಸಳೆ ದಾಳಿ ಮಾಡಿ ಎಳೆದುಕೊಂಡು ಹೋದ ಘಟನೆ ದಾಂಡೇಲಿಯ ಪಟೇಲ ನಗರದ ಬಳಿಯ ಕಾಳಿ ನದಿಯಲ್ಲಿ ನಡೆದಿದೆ.

ಶುಕ್ರವಾರ ಸಂಜೆ ದಾಹ ತೀರಿಸಿಕೊಳ್ಳಲು ಕಾಳಿನದಿಗೆ ಜಿಂಕೆಯೊಂದು ಇಳಿದಿದೆ. ನದಿಯಲ್ಲಿ ಈಜುತ್ತಾ ಮತ್ತೊಂದು ದಡಕ್ಕೆ ತೆರಳುತ್ತಿದ್ದ ಜಿಂಕೆ ಮೇಲೆ ಮೊಸಳೆ ದಾಳಿ ಮಾಡಿ ಎಳೆದೊಯ್ದಿದೆ.

ಘಟನೆ ನಡೆದ ಸ್ಥಳದಲ್ಲಿದ್ದ ಸ್ಥಳೀಯರು ಜಿಂಕೆಯನ್ನು ಕಾಪಾಡಲು ಎಷ್ಟೇ ಆರ್ಭಟಿಸಿದರು, ಕೂಗಾಡಿದರು ಫಲಕಾರಿಯಾಗಲಿಲ್ಲ. ಇತ್ತಿಚೇಗೆ ಇದೇ ಭಾಗದಲ್ಲಿ ಯುವಕನೊಬ್ಬನನ್ನು ಮೊಸಳೆ ನೀರಿನಲ್ಲಿ ಎಳೆದುಕೊಂಡು ಹೋಗಿತ್ತು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿರುವುದು ಇಲ್ಲಿರುವ ಜನರಲ್ಲಿ ಆತಂಕ ಹೆಚ್ಚಿಸಿದೆ.


Spread the love

About Laxminews 24x7

Check Also

ಸಿಎಂ ಸಿದ್ದರಾಮಯ್ಯ ಬಗ್ಗೆ ಆಡಳಿತ ಪಕ್ಷದವರೇ ವಿಶ್ವಾಸ ಕಳೆದುಕೊಂಡಿದ್ದಾರೆ: ಬಿ ವೈ ವಿಜಯೇಂದ್ರ

Spread the loveಶಿವಮೊಗ್ಗ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಆಡಳಿತ ಪಕ್ಷದ ಶಾಸಕರುಗಳೇ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ