Breaking News

ನಾವು ನಿಮ್ಮ ಅಪ್ಪ – ಬಿಜೆಪಿ ಬೆದರಿಕೆಗೆ ಶಿವಸೇನೆ ತಿರುಗೇಟು

Spread the love

ಮುಂಬೈ: ಠಾಕ್ರೆ ಕುಟುಂಬ ಮತ್ತು ಮಹಾರಾಷ್ಟ್ರ ಸರ್ಕಾರಕ್ಕೆ ಬೆದರಿಕೆ ಹಾಕಿರುವ ಬಿಜೆಪಿ ನಾಯಕ ಮತ್ತು ಕೇಂದ್ರ ಸಚಿವ ನಾರಾಯಣ ರಾಣೆಗೆ ಶಿವಸೇನೆ ಸಂಸದ ಸಂಜಯ್‌ ರಾವತ್‌ ತಿರುಗೇಟು ನೀಡಿದ್ದಾರೆ. ಬೆದರಿಕೆ ಒಡ್ಡುವುದನ್ನು ನಿಲ್ಲಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೀವು ಕೇಂದ್ರ ಸಚಿವರಾಗಿರಬಹುದು ಆದರೆ ಇದು ಮಹಾರಾಷ್ಟ್ರ. ಈ ವಿಚಾರವನ್ನು ಮರೆಯಬೇಡಿ. ನಾವು ನಿಮ್ಮ ತಂದೆ. ಇದರ ಅರ್ಥವೇನೆಂದು ನಿಮಗೆ ಚೆನ್ನಾಗಿ ತಿಳಿದಿದೆ ಎಂದು ರಾವತ್‌ ವಾಗ್ದಾಳಿ ನಡೆಸಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರ ಉಪನಗರ ಬಾಂದ್ರಾದಲ್ಲಿರುವ ಖಾಸಗಿ ನಿವಾಸ ಮಾತೋಶ್ರೀಯಲ್ಲಿ ನಾಲ್ವರಿಗೆ ಜಾರಿ ನಿರ್ದೇಶನಾಲಯದ ಸೂಚನೆಯೊಂದು ಸಿದ್ಧವಾಗಿದೆ ಎಂದು ಕೇಂದ್ರ ಸಚಿವ ರಾಣೆ ಹೇಳಿಕೆ ನೀಡಿದ್ದರು.

ಈ ಹೇಳಿಕೆಗೆ ಪ್ರತಿಯಾಗಿ ಟಾಂಗ್‌ ನೀಡಿರುವ ರಾವತ್‌, ನಿಮ್ಮ ಜಾತಕ ನಮ್ಮ ಬಳಿ ಇದೆ ಎಂದು ನಾರಾಯಣ ರಾಣೆ ಹೆದರಿಸುತ್ತಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ