Breaking News

ಮಹಾ ಶಿವರಾತ್ರಿ: ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಭಕ್ತರಿಗಾಗಿ ಹೊಸ ಆ್ಯಪ್ ಬಿಡುಗಡೆ

Spread the love

ಲಕ್ನೋ: ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರಿಗಾಗಿ ಶ್ರೀ ಕಾಶಿ ವಿಶ್ವನಾಥ ದೇವಸ್ಥಾನ ಟ್ರಸ್ಟ್ ನಿಂದ ಹೊಸ ಅಪ್ಲಿಕೇಶನ್ ಬಿಡುಗಡೆ ಮಾಡಲಾಗಿದೆ.

ಮಹಾ ಶಿವರಾತ್ರಿಯ ಸಂದರ್ಭದಲ್ಲಿ ಕಾಶಿ ವಿಶ್ವನಾಥನ ದರ್ಶನ ಪಡೆಯಲು ಹಲವು ಭಕ್ತಾದಿಗಳು ತುಂಬಾ ದಿನದಿಂದ ಕಾಯುತ್ತಿರುತ್ತಾರೆ. ಭಕ್ತರಿಗಾಗಿ ದೇವಸ್ಥಾನ ಟ್ರಸ್ಟ್ ಒಂದು ಹೊಸ ಅಪ್ಲಿಕೇಶನ್ ಬಿಟ್ಟಿದೆ. ಈ ಅಪ್ಲಿಕೇಶನ್ ನಲ್ಲಿ ಭಕ್ತರು ನೋಂದಾಯಿಸಿಕೊಳ್ಳುವ ಮೂಲಕ ದರ್ಶನವನ್ನು ಪಡೆಯಬಹುದು. ಈ ಆ್ಯಪ್ ಮೂಲಕ ಯಾವ ವೇಳೆ ಕಾಶಿ ದರ್ಶನ ಪಡೆಯಬೇಕು ಎಂಬುದನ್ನು ತಿಳಿದುಕೊಳ್ಳಬಹುದು. ಆ್ಯಪ್ ನಲ್ಲಿ ದರ್ಶನಕ್ಕೆ ಸರಿಯಾದ ಮಾರ್ಗ ಮತ್ತು ಸಮಯದ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತೆ. ಆ್ಯಪ್‍ನಲ್ಲಿ ಭಕ್ತರು ನೋಂದಾಯಿಸಿಕೊಂಡರೆ ದೇವಾಲಯದ ಆಡಳಿತವು ಅವರಿಗೆ ಒಂದು ನಿರ್ದಿಷ್ಟ ಸಮಯ ಕೊಟ್ಟು ದೇವರ ದರ್ಶನ ಪಡೆಯುವಂತೆ ಸೂಚಿಸುತ್ತೆ. ಈ ಮೂಲಕ ದೇವಾಲಯದ ಆಡಳಿತ ಮಂಡಳಿಯು ಜನಸಂದಣಿಯನ್ನು ಸರಿಯಾಗಿ ನಿರ್ವಹಿಸಲು ಸಹಾಯ ಮಾಡುತ್ತದೆ.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ