Breaking News

ನಷ್ಟದ ಭೀತಿ ತಪ್ಪಿಸಲು ಕೆಎಂಎಫ್​ನಿಂದ ಹೊಸ ಪ್ಲಾನ್; ರಾಬಕೋ ಒಕ್ಕೂಟದಿಂದ ಸಿಬ್ಬಂದಿಗಳಿಗೆ ತುಪ್ಪದ ಟಾರ್ಗೆಟ್

Spread the love

ಬಳ್ಳಾರಿ:  ಪ್ರಮುಖ ಜಿಲ್ಲೆಗಳಾದ ಬಳ್ಳಾರಿ, ರಾಯಚೂರು, ಕೊಪ್ಪಳದ ಹಾಲು ಒಕ್ಕೂಟ ನಷ್ಟದತ್ತ ಸಾಗಿದೆ. ಸದ್ಯ ನಾಲ್ಕೂವರೆ ಕೋಟಿ ರೂಪಾಯಿ ನಷ್ಟದಲ್ಲಿರುವ ರಾಬಕೋ ಸಂಸ್ಥೆ ನಷ್ಟದಿಂದ ಹೊರಬರಲು ಹೊಸ ಯೋಜನೆಯೊಂದನ್ನು ಮಾಡಿದೆ. ತುಪ್ಪ ಮಾರಾಟ ಹೆಚ್ಚಳ ಮಾಡಲು ಸಿಬ್ಬಂದಿಗಳಿಗೆ ಹೊಸ ಟಾರ್ಗೆಟ್ ನೀಡಲಾಗಿದೆ. ಆದರೆ ಹೆಚ್ಚು ಹೆಚ್ಚು ತುಪ್ಪ(Ghee) ಮಾರಿ ಸಂಸ್ಥೆಗೆ ಲಾಭ ತರಬೇಕಾದ ಸಿಬ್ಬಂದಿಗಳಿಗೆ ಇದೀಗ ಕಡಿಮೆ ದರಕ್ಕೆ ಹೆಚ್ಚು ತುಪ್ಪ ಸಿಗುತ್ತಿರುವುದು ಅನುಮಾನಕ್ಕೆ ಎಡೆ ಮಾಡಿ ಕೊಟ್ಟಿದೆ ಕೆಎಂಎಫ್​ನ(KMF) ನಂದಿನಿ ತುಪ್ಪ ಅಂದರೆ ತಾಜಾ, ಪರಿಶುದ್ಧ ಸ್ವಾದಿಷ್ಠ ತುಪ್ಪ ಎನ್ನುವ ಮಾತಿದೆ. ನಂದಿನಿ ಎನ್ನುವ ಹೆಸರನ್ನೇ ಬಳಸಿ ಹಲವರು ನಕಲಿ ತುಪ್ಪ ಮಾರಾಟ ಮಾಡುವುದಕ್ಕೆ ಪ್ರಯತ್ನ ಮಾಡುತ್ತಿರುವುದು ಇತ್ತೀಚೆಗೆ ಬೆಳಕಿಗೆ ಬಂದಿದೆ. ಹೀಗಿರುವಾಗಲೇ ಮತ್ತಷ್ಟು ತುಪ್ಪ ಮಾರಾಟವನ್ನು ಹೆಚ್ಚಳ ಮಾಡುವುದಕ್ಕೆ ಇದೀಗ ಕೆಎಂಎಫ್ ಸಂಸ್ಥೆ ಹೊಸ ಯೋಜನೆ ಮಾಡಿದೆ. ನಷ್ಟದ ಭೀತಿಯಲ್ಲಿರುವ ರಾಬಕೋ( Robako) ಒಕ್ಕೂಟವನ್ನು ಲಾಭದತ್ತ ತರಲು ಸಿಬ್ಬಂದಿಗಳಿಗೆ ತುಪ್ಪ ಮಾರಾಟ ಮಾಡುವ ಟಾರ್ಗೆಟ್ ನೀಡಿದೆ.

 

ಇದು ಬಳ್ಳಾರಿ, ರಾಯಚೂರು, ಕೊಪ್ಪಳ ಹಾಲು ಉತ್ಪಾದಕರ ಸಹಕಾರ ಸಂಘದ ಒಕ್ಕೂಟ. ರಾಬಕೋ ಎಂದೇ ಹೆಸರುವಾಸಿಯಾಗಿರುವ ಈ ಒಕ್ಕೂಟ ಇದೀಗ ನಷ್ಟದಲ್ಲಿದೆ.  ಸದ್ಯ ನಾಲ್ಕುವರೆ ಕೋಟಿ ರೂಪಾಯಿ ನಷ್ಟದಲ್ಲಿರುವ ಒಕ್ಕೂಟ ಇತ್ತೀಚಿಗಷ್ಠೆ ಹಾಲು ಉತ್ಪಾದಕರಿಗೆ ಹಾಲಿನ ದರ ಕಡಿತಗೊಳಿಸಿ, ಒಕ್ಕೂಟವನ್ನು ಲಾಭಕ್ಕೆ ತರುವ ಪ್ರಯತ್ನ ಮಾಡಿತ್ತು. ಇದರ ಜೊತೆಗೆ ಇದೀಗ ನಂದಿನಿ ತುಪ್ಪ ಮಾರಾಟ ಮಾಡುವುದಕ್ಕೆ ಮತ್ತೊಂದು ಯೋಜನೆ ಮಾಡಿದೆ.


Spread the love

About Laxminews 24x7

Check Also

ಸಕ್ಕರೆ ಕಾರ್ಖಾನೆಯ ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನೊಬ್ಬ ಸಾವ

Spread the love ಬೆಳಗಾವಿ: ಸಕ್ಕರೆ ಕಾರ್ಖಾನೆಯ ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಹುಕ್ಕೇರಿ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ