ಚಿಕ್ಕೋಡಿ: ಶಿವಮೊಗ್ಗದಲ್ಲಿ ಮುಸ್ಲಿಂ ಗೂಂಡಾಗಳಿಂದ ಹತ್ಯೆ ಆಗಿದೆ ಎಂಬ ಸಚಿವ ಈಶ್ವರಪ್ಪ ಹೇಳಿಕೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಖಂಡಿಸಿದ್ದಾರೆ.
ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಘಟನೆ ಇವರೇ ಮಾಡಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ. ಈ ಬಗ್ಗೆ ತನಿಖೆ ನಡೆಸಲೆಂದೇ ಪೊಲೀಸ್ ಇಲಾಖೆ ಇದೆ. ಪೊಲೀಸರು ತನಿಖೆ ಮಾಡಲಿ ಎಂದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಯಾವ ರೀತಿ ಇದೆ ಎಂದು ನೀವೇ ನೋಡುತ್ತಿದ್ದೀರಾ. ಮುಂದಿನ ದಿನಗಳಲ್ಲಿ ಇದಕ್ಕೆಲ್ಲ ಜನ ಉತ್ತರ ಕೊಡುತ್ತಾರೆ. ಸದ್ಯ ಯಾರು ಈ ಘಟನೆಯನ್ನು ಮಾಡಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಹೇಳಿದರು