Breaking News

ಸಿಎಂ ಭೇಟಿಯಾದ ಮುತಾಲಿಕ್​: ಹರ್ಷ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡುವಂತೆ ಒತ್ತಾಯ

Spread the love

ಬೆಂಗಳೂರು: ಭಜರಂಗದಳ ಸಂಘಟನೆ ಕಾರ್ಯಕರ್ತ ಹರ್ಷ ಕೊಲೆ ಖಂಡಿಸಿರುವ ಶ್ರೀರಾಮ ಸೇನೆಯ ನಿಯೋಗವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ನಾಲ್ಕು ಅಂಶಗಳ ಬಗ್ಗೆ‌ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಪತ್ರ ನೀಡಿದೆ.

ಶ್ರೀರಾಮ ಸೇನೆಯ ನಿಯೋಗದ ಮನವಿ ಪತ್ರ

ಈ ಬಗ್ಗೆ ಮಾತನಾಡಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷನನ್ನ ಕೊಲೆ ಮಾಡಿರುವುದು ಹೇಯ ಕೃತ್ಯವಾಗಿದೆ‌‌.

ಇನ್ನೊಂದು ತಿಂಗಳೊಳಗೆ ಎಲ್ಲಾ ಆರೋಪಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಎಸ್​ಡಿಪಿಐ, ಪಿಎಫ್ಐ ಹಾಗೂ ಸಿಎಫ್​​ಐ ಸಂಘಟನೆಗಳಿಂದ ಎರಡು ವರ್ಷಗಳಿಂದ ಮೃತ ಹರ್ಷನಿಗೆ ಜೀವ ಬೆದರಿಕೆ ಇದ್ದರೂ ಸಹ ಸರ್ಕಾರ ರಕ್ಷಣೆ ನೀಡದಿರುವುದು ನಾಚಿಗೇಡಿನ ಸಂಗತಿಯಾಗಿದೆ‌ ಎಂದು ವಾಗ್ದಾಳಿ ನಡೆಸಿದರು.

ಈ ಹಿಂದೆ ಪ್ರತಿಪಕ್ಷದಲ್ಲಿದ್ದಾಗ ಬಿಜೆಪಿಯು ರಾಜ್ಯದಲ್ಲಿ ಎಸ್​ಡಿಪಿಐ ಹಾಗೂ ಪಿಎಫ್ಐ ಸಂಘಟನೆ ನಿಷೇಧಿಸುವಂತೆ ಒತ್ತಾಯಿಸಿತ್ತು.‌ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಇಂತಹ ಸಂಘಟನೆಗಳನ್ನ ನಿಷೇಧಿಸಬೇಕು. ಮೃತ ಹರ್ಷನ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಬೇಕು ಹಾಗೂ ಹಿಂದೂ‌ ಕಾರ್ಯಕರ್ತರಿಗೆ ಹಾಗೂ ಮುಖಂಡರಿಗೆ ಭದ್ರತೆ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಬಿಎಂಐಸಿ ಯೋಜನೆಯನ್ನು ಮರುಪರಿಶೀಲಿಸಲು ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

Spread the loveಬೆಂಗಳೂರು: ಕಳೆದ 25 ವರ್ಷಗಳಲ್ಲಿ ಕೇವಲ ಒಂದು ಕಿಲೋ ಮೀಟರ್‌ ಮಾತ್ರ ನಿರ್ಮಾಣಗೊಂಡಿರುವ ಬೆಂಗಳೂರು ಮೈಸೂರು ಮೂಲ ಸೌಕರ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ