Breaking News

ಶಿವಮೊಗ್ಗ ಹತ್ಯೆ ಕೇಸ್:ಈಶ್ವರಪ್ಪ ಹೇಳಿಕೆ ಸಮರ್ಥಿಸಿಕೊಳ್ಳದ ಸಿಎಂ

Spread the love

ಬೆಂಗಳೂರು : ಶಿವಮೊಗ್ಗದಲ್ಲಿ ಭಾನುವಾರ ರಾತ್ರಿ ನಡೆದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಗೆ ‘ಮುಸ್ಲಿಂ ಗೂಂಡಾಗಳೇ ಕಾರಣಕರ್ತರು’ ಎಂಬ ಹೇಳಿಕೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಮರ್ಥಿಸಿಕೊಳ್ಳಲು ನಿರಾಕರಿಸಿದ್ದು,’ಅವರು ಹೇಳಿದ ಮಾತ್ರಕ್ಕೆ ನಾನು ಹೇಳಬೇಕು ಅಂತಿಲ್ಲ, ತನಿಖೆ ನಡೆದ ಬಳಿಕ ಎಲ್ಲವೂ ಹೊರಗೆ ಬರಲಿದೆ’ಎಂದು ಹೇಳಿದ್ದಾರೆ.

 

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ‘ರಾತ್ರಿ ಹರ್ಷ ಅನ್ನೋ ಹುಡುಗ ಹತ್ಯೆಯಾಗಿದ್ದು, ಅವನ ಹೆಸರೇ ಹಿಂದೂ ಹರ್ಷ ಅಂತ. ಈಗಾಗಲೇ ತನಿಖೆ ನಡೆಯುತ್ತಿದೆ.ಯಾರೆಲ್ಲಾ ಭಾಗಿಯಾಗಿದ್ದಾರೆ ಅನ್ನೋ ಪ್ರಾಥಮಿಕ ಮಾಹಿತಿ ಕಲೆ ಹಾಕಲಾಗುತ್ತಿದೆ.ಈ ನಡುವೆ ಯಾವುದೇ ಅಹಿತ ಕರ ಘಟನೆ ನಡೆಯದಂತೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಶೀಘ್ರವೇ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ’ ಎಂದರು.


Spread the love

About Laxminews 24x7

Check Also

ಅಭಿವೃದ್ಧಿಯ ಹರಿಕಾರರು ಶೋಷಿತ ವರ್ಗಗಳ ಆಶಾಕಿರಣ ಬಡವರ ಬಂಧು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಜನ್ಮದಿನಾಚರಣೆ ಸಂಭ್ರಮ

Spread the loveದೇವನಹಳ್ಳಿ:  ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ