ಧಾರವಾಡ: ಶಾಂತಿ ಸುವ್ಯವಸ್ಥೆ ಕಾಪಾಡಬೇಕಾಗಿದ್ದ ಪೊಲೀಸರೇ ಕಾನೂನನ್ನು ಕೈಗೆ ತೆಗೆದುಕೊಂಡು ಬಡಿದಾಡಿದ ಘಟನೆ ನಡೆದಿದೆ. ಬೀಟ್ ಡ್ಯೂಟಿಗೆ ತಡವಾಗಿ ಬಂದರು ಎಂಬ ಕಾರಣಕ್ಕೆ ಹೆಲ್ಮೆಟ್ ಹಾಗೂ ಲಾಠಿಯಿಂದ ಒಬ್ಬರಿಗೊಬ್ಬರು ಬಡಿದಾಡಿಕೊಂಡ ಪ್ರಸಂಗ ನಡೆದಿದ್ದು, ಸದ್ಯ ಸಿದ್ದಪ್ಪ ಚಲುವಾದಿ ಅನ್ನೋರ ತಲೆಗೆ ತೀವ್ರ ಪೆಟ್ಟಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆ ಹುಬ್ಬಳಿಯ ಶಹರ ಠಾಣೆಯಲ್ಲಿ ನಡೆದಿದ್ದು, ಪೊಲೀಸ್ ಕಾನ್ಸ್ಟೇಬಲ್ ಪ್ರಕಾಶ್ ಗೋವಿಂದಪ್ಪನವರ ಮತ್ತು ಬೀಟ್ ಸಿಬ್ಬಂದಿ ಸಿದ್ದಪ್ಪ ಚಲುವಾದಿ ಇಬ್ಬರು ಹೆಲ್ಮೆಟ್ ಹಾಗೂ ಲಾಠಿಗಳಿಂದ ಠಾಣೆಯಲ್ಲಿ ಬಡಿದಾಡಿಕೊಂಡಿದ್ದಾರೆ. ಅದಾದ ನಂತರ ಮತ್ತೊಮ್ಮೆ ಠಾಣೆಯ ಹಿಂಭಾಗಕ್ಕೆ ಹೋಗಿ ಮತ್ತೆ ಅಲ್ಲಿಯೂ ಕಿತ್ತಾಡಿಕೊಂಡಿದ್ದಾರೆ. ಈ ವೇಳೆ ಸಿದ್ದಪ್ಪನ ತಲೆಗೆ ಗಂಭೀರ ಗಾಯಗಳಾಗಿದ್ದು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.