Breaking News

ಚುನಾವಣೆಯಲ್ಲಿ ಜೆಡಿಎಸ್ ಗೆದ್ದು ಅಧಿಕಾರ ಹಿಡಿಯೋದು ಭ್ರಮೆ: ಡಿಕೆಶಿ

Spread the love

ಪಾಂಡವಪುರ, ಫೆ.22: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಸ್ವತಃ ಬಲದೊಂದಿಗೆ ಗೆದ್ದು ಅಧಿಕಾರ ಹಿಡಿಯೋದು ಭ್ರಮೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

ಪಟ್ಟಣದ ಟಿಎಪಿಸಿಎಂಎಸ್ ರೈತ ಸಂಭಾಂಗಣದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಮಂಗಳವಾರ ಆಯೋಜಿಸಿದ್ದ ನಮ್ಮ ನೀರು ನಮ್ಮ ಹಕ್ಕು ಮೇಕೆದಾಟು ಪಾದಯಾತ್ರೆ ಪೂರ್ವಭಾವಿ ಸಭೆ ಹಾಗೂ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ನೋಂದಣಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

 

ಜನರಿಗೆ ಯಾರನ್ನು ಬೇಕಾದರೂ ಸೋಲಿಸುವ ಮತ್ತು ಯಾರನ್ನು ಬೇಕಾದರೂ ಗೆಲ್ಲಿಸುವ ತಾಕತ್ತು ಇದೆ. ಕಳೆದ ವಿಧಾನ ಪರಿಷತ್ ಚುನವಣೆಯಲ್ಲಿ ಜಿಲ್ಲೆಯಲ್ಲಿ ಜೆಡಿಎಸ್‍ನ ಆರು ಶಾಸಕರಿದ್ದರೂ ಅವರ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಅವರ ನಡುವೆ ಕಾಂಗ್ರೆಸ್‍ನ ದಿನೇಶ್ ಗೂಳಿಗೌಡರು ಆಯ್ಕೆಯಾದರು. ಜನ ತೀರ್ಮಾನ ಮಾಡಿದರೆ ಏನೂ ಬೇಕಾದರೂ ಸಾಧ್ಯ ಎಂಬುದು ಇದರಿಂದ ತಿಳಿಯುತ್ತದೆ ಎಂದರು.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ