Breaking News

35 ಬಣವಿಗೆ ಬೆಂಕಿ ತಗುಲಿ ಅಪಾರ ಹಾನಿಗೊಳಗಾದ ಕುಟುಂಬಸ್ಥರಿಗೆ ತಲಾ 10 ಸಾವಿರ ರೂ. ಪರಿಹಾರ ನೀಡುವುದಾಗಿ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಅವರ ಘೋಷಣೆ

Spread the love

ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದಲ್ಲಿ 35 ಬಣವಿಗೆ ಬೆಂಕಿ ತಗುಲಿ ಅಪಾರ ಹಾನಿಗೊಳಗಾದ ಕುಟುಂಬಸ್ಥರಿಗೆ ತಲಾ 10 ಸಾವಿರ ರೂ. ಪರಿಹಾರ ನೀಡುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಅವರು ಘೋಷಣೆ ಮಾಡಿದ್ದಾರೆ.ಶುಕ್ರವಾರ ಹೊಸ ವಂಟಮುರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಭೂತರಾಮನಹಟ್ಟಿ ಗ್ರಾಮದಲ್ಲಿ 35 ಬಣವಿಗೆ ಆಕಸ್ಮಿಕ ಬೆಂಕಿ ತಗುಲಿದ್ದು, ಅಪಾರ ಪ್ರಮಾಣದ ಮೇವು ಹಾನಿಯಾಗಿತ್ತು. ಈ ಹಿನ್ನೆಲೆಯಲ್ಲಿ ಹಾನಿಗೊಳಗಾದ ಕುಟುಂಬಸ್ಥರಿಗೆ ತಲಾ 10 ಸಾವಿರ ರೂ. ಪರಿಹಾರವನ್ನು ಸತೀಶ ಜಾರಕಿಹೊಳಿ ಘೋಷಿಸಿದ್ದಾರೆ. ನಾಳೆ ಭೂತರಾಮನಹಟ್ಟಿ ಗ್ರಾಮಕ್ಕೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಭೇಟಿ ನೀಡಿ ಹಾನಿಗೊಳಗಾದ ಕುಟುಂಬಸ್ಥರಿಗೆ ಪರಿಹಾರ ನೀಡಲಿದ್ದಾರೆ.


Spread the love

About Laxminews 24x7

Check Also

ಬಿಎಂಐಸಿ ಯೋಜನೆಯನ್ನು ಮರುಪರಿಶೀಲಿಸಲು ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

Spread the loveಬೆಂಗಳೂರು: ಕಳೆದ 25 ವರ್ಷಗಳಲ್ಲಿ ಕೇವಲ ಒಂದು ಕಿಲೋ ಮೀಟರ್‌ ಮಾತ್ರ ನಿರ್ಮಾಣಗೊಂಡಿರುವ ಬೆಂಗಳೂರು ಮೈಸೂರು ಮೂಲ ಸೌಕರ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ