Breaking News

ಬೆಳಗಾವಿ ತಾಲೂಕಿನ ಬೆಳಗುಂದಿಗ್ರಾಮದಲ್ಲಿ ವ್ಯಕ್ತಿಯೋರ್ವನ ಬರ್ಬರ ಹತ್ಯೆ ಕುತ್ತಿಗೆಯನ್ನು ಕತ್ತರಿಸಿ ಪರಾರಿಯಾದ ಕೊಲೆಪಾತಕಿಗಳು

Spread the love

ಬೆಳಗಾವಿ ತಾಲೂಕಿನ ಬೆಳಗುಂದಿಗ್ರಾಮದಲ್ಲಿ ವ್ಯಕ್ತಿಯೋರ್ವನ ಬರ್ಬರ ಹತ್ಯೆ ಕುತ್ತಿಗೆಯನ್ನು ಕತ್ತರಿಸಿ ಪರಾರಿಯಾದ ಕೊಲೆಪಾತಕಿಗಳು

ಗಜಾನನ ನಾಯಿಕ್ ಕೊಲೆಯಾದ ದುರ್ದೈವಿ. ಸುಮಾರು ಅನೇಕ ವರ್ಷಗಳಿಂದ ಗಜಾನನ ನಾಯಕ್ ಹಾಗೂ ಅವರ ಪತ್ನಿ ಬೇರೆಯಾಗಿಯೇ ವಾಸಮಾಡುತ್ತಿದ್ದರು. ಗಜಾನನ ತಮ್ಮ ಮಗನೊಂದಿಗೆ ವಾಸ ಮಾಡುತ್ತಿದ್ದರು. ನಿನ್ನೆ ಮಗ ಉಜಗಾಂವ್‍ಗೆ ಹೋದ ಸಂದರ್ಭದಲ್ಲಿ ಇಂದು ಮಧ್ಯಾಹ್ನ ಮನೆಗೆ ಬಂದು ನೋಡಿದಾಗ ತಂದೆ ಶವವಾಗಿ ಬಿದ್ದಿರುವುದನ್ನು ನೋಡಿದ್ದಾರೆ. ಇನ್ನು ಮಾಹಿತಿ ತಿಳಿಯುತ್ತಿದ್ದಂತೆ ಡಿಸಿಪಿ ರವಿಂದ್ರ ಗಡಾದಿ, ಎಸಿಪಿ ಗಣಪತಿ ಗುಡಾಜಿ, ಸಿಪಿಐ ಸುನೀಲ್ ಕುಮಾರ್, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಕೊಲೆ ಮಾಡಿರುವ ಕಿಡಿಗೇಡಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.


Spread the love

About Laxminews 24x7

Check Also

ಖಮೇನಿ ಹತ್ಯೆ ಪ್ರತಿಭಟನೆಗಳ ಬಗ್ಗೆ ಪೋಸ್ಟ್‌ – ಕಾಶ್ಮೀರ ಸಂಸದರ ವಿರುದ್ಧ ಎಫ್‌ಐಆರ್‌

Spread the loveಶ್ರೀನಗರ: ಇರಾನ್‌ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ  ಹತ್ಯೆ ಪ್ರತಿಭಟನೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ