Breaking News

ನಾನು ಅಂಬರೀಶ್ ಮಾಡಬಾರದನ್ನೂ ಮಾಡಿದ್ದೇವೆ’: ಸಿಎಂ ಬೊಮ್ಮಾಯಿ

Spread the love

ಬೆಂಗಳೂರು, ಫೆ 28: ಕನ್ನಡ ಚಿತ್ರೋದ್ಯಮದಲ್ಲಿ ರೆಬೆಲ್ ಸ್ಟಾರ್ ಎಂದೇ ಗುರುತಿಸಿಕೊಂಡಿದ್ದ ಅಂಬರೀಶ್ ಅವರ ಸಮಾಧಿ ಜಾಗದಲ್ಲಿ ಸ್ಮಾರಕ ನಿರ್ಮಾಣ ಕಾರ್ಯದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫ್ಲ್ಯಾಷ್ ಬ್ಯಾಕಿಗೆ ಹೋಗಿದ್ದಾರೆ.

ತಮ್ಮ ಮತ್ತು ಅಂಬರೀಶ್ ಅವರ ನಲವತ್ತು ವರ್ಷದ ಒಡನಾಟದ ಬಗ್ಗೆ ರಸವತ್ತಾಗಿ ಸಭೆಯಲ್ಲಿ ವಿವರಣೆಯನ್ನು ನೀಡಿದ ಬೊಮ್ಮಾಯಿ ಅವರ ಹೇಳಿಕೆಗೆ ನೆರೆದಿದ್ದ ಜನಸ್ತೋಮ ಚಪ್ಪಾಳೆಯ ಮೇಲೆ ಚಪ್ಪಾಳೆಯನ್ನು ಹೊಡೆದಿದೆ.

“ನನ್ನ ಆತ್ಮೀಯ ಸ್ನೇಹಿತ ಅಂಬರೀಶ್, ನಮ್ಮ ಸ್ನೇಹ ನಲವತ್ತು ವರ್ಷಕ್ಕಿಂತ ಹೆಚ್ಚಿನದ್ದು. ಒಟ್ಟಿಗೆ ಓಡಾಡಿದ್ದೇವೆ, ಜೊತೆಗೆ ಸಮಯ ಕಳೆದಿದ್ದೇವೆ, ಊಟ ಮಾಡಿದ್ದೇವೆ, ರಾಜ್ಯಾದ್ಯಂತ ಸುತ್ತಿದ್ದೇವೆ, ಮಾಡಬೇಕಾಗಿರುವುದನ್ನು ಮಾಡಿದ್ದೇವೆ, ಮಾಡಬಾರದನ್ನೂ ಮಾಡಿದ್ದೇವೆ. ಅಂಬರೀಶ್ ಎನ್ನುವುದು ತೆರೆದ ಪುಸ್ತಕ”ಎಂದು ಬೊಮ್ಮಾಯಿ ತಮ್ಮ ಹಿಂದಿನ ಒಡನಾಟವನ್ನು ನೆನೆಪಿಸಿಕೊಂಡಿದ್ದಾರೆ.

“ಅಂಬರೀಶ್ ಅವರು ಅಧಿಕಾರದಲ್ಲಿ ಇರಲಿ, ಇಲ್ಲದೇ ಇರಲಿ, ಯಾವುದಕ್ಕೂ ಅಂಟಿಕೊಂಡು ಇದ್ದವರಲ್ಲ. ಅಧಿಕಾರವನ್ನು ಧಿಕ್ಕರಿಸಿಯೇ ರಾಜಕಾರಣ ಮಾಡಿದವರು ಅಂಬರೀಶ್. ಆ ರೀತಿಯ ವ್ಯಕ್ತಿಗಳು ರಾಜಕೀಯದಲ್ಲಿ ಸಿಗುವುದು ಬಹಳ ಕಡಿಮೆ”ಎಂದು ಬೊಮ್ಮಾಯಿ ಹೇಳಿದ್ದಾರೆ.

“ಅಂಬರೀಶ್ ಕೇಂದ್ರ ಸಚಿವರಾಗಿದ್ದ ವೇಳೆ, ಕಾವೇರಿ ವಿಚಾರದಲ್ಲಿ ಒಂದು ಕ್ಷಣವೂ ಯೋಚಿಸದೇ ರಾಜೀನಾಮೆಯನ್ನು ಬಿಸಾಕಿ, ಕನ್ನಡ ನಾಡಿನ ಪರವಾಗಿ ನಿಂತವರು ನಮ್ಮ ಅಂಬರೀಶ್. ಬಹಳಷ್ಟು ನಾಯಕರು ಕಾವೇರಿ ಹೋರಾಟದ ಬಗ್ಗೆ ಮಾತನಾಡುತ್ತಾರೆ, ಆದರೆ, ಕಾವೇರಿ ವಿಚಾರಕ್ಕೆ ಪದವಿಯನ್ನೇ ತ್ಯಾಗ ಮಾಡಿದವರು ಎಂದರೆ ಅದು ಅಂಬರೀಶ್”ಎಂದು ಬೊಮ್ಮಾಯಿ ಹೇಳಿದ್ದಾರೆ.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ