Breaking News
Home / ರಾಜಕೀಯ / ಉಕ್ರೇನ್ ರಾಜಧಾನಿಗೆ ರಷ್ಯಾ ಸೇನೆ ಲಗ್ಗೆ: ಸ್ವದೇಶಕ್ಕೆ ಮರಳಲು ಭಾರತೀಯ ವಿದ್ಯಾರ್ಥಿಗಳ ತಹತಹ

ಉಕ್ರೇನ್ ರಾಜಧಾನಿಗೆ ರಷ್ಯಾ ಸೇನೆ ಲಗ್ಗೆ: ಸ್ವದೇಶಕ್ಕೆ ಮರಳಲು ಭಾರತೀಯ ವಿದ್ಯಾರ್ಥಿಗಳ ತಹತಹ

Spread the love

ರಷ್ಯಾದ ಪಡೆಗಳು ಉಕ್ರೇನ್ ರಾಜಧಾನಿ ಕೀವ್ ನಗರ ಪ್ರವೇಶಿಸುತ್ತಿವೆ. ಉಕ್ರೇನ್​ಗೆ ಪೊಲೆಂಡ್ ಯುದ್ಧವಿಮಾನಗಳನ್ನು ಕಳಿಸಿಕೊಟ್ಟಿದ್ದರೆ ಆಸ್ಟ್ರೇಲಿಯಾ ಸೇರಿದಂತೆ ಹಲವು ದೇಶಗಳು ತುರ್ತು ಮಿಲಿಟರಿ ನೆರವು ಒದಗಿಸಲು ಮುಂದಾಗಿವೆ

ಇಡೀ ದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣಗೊಂಡಿದೆ. ಉಕ್ರೇನ್​ನಲ್ಲಿ ಸಿಲುಕಿರುವ ಭಾರತ ಮತ್ತು ಇತರ ದೇಶಗಳ ವಿದ್ಯಾರ್ಥಿಗಳ ಸ್ವದೇಶಗಳಿಗೆ ಮರಳಲು ತಹತಹಿಸುತ್ತಿದ್ದಾರೆ.

Russia Attacks Ukraine: ಜಾಗತಿಕ ಸೂಪರ್​ಪವರ್ ರಷ್ಯಾ (Russia) ತನ್ನ ನೆರೆಯ ಉಕ್ರೇನ್ (Ukraine) ವಿರುದ್ಧ ದಂಡೆತ್ತಿ ಹೋಗಿರುವುದು ವಿಶ್ವದೆಲ್ಲೆಡೆ ತಲ್ಲಣ ಹುಟ್ಟಿಸಿದೆ. ವಿದ್ಯಾಭ್ಯಾಸಕ್ಕೆಂದು ಉಕ್ರೇನ್​ಗೆ ತೆರಳಿರುವ ತನ್ನ ವಿದ್ಯಾರ್ಥಿಗಳನ್ನು ತರಾತುರಿಯಲ್ಲಿ ಹಿಂದಕ್ಕೆ ಕರೆಸಿಕೊಳ್ಳಲು ಭಾರತವೂ ಸೇರಿದಂತೆ ವಿವಿಧ ದೇಶಗಳ ವಿದೇಶಾಂಗ ವ್ಯವಹಾರಗಳ ಇಲಾಖೆಯು ಕೊನೇ ಕ್ಷಣದ ಪ್ರಯತ್ನಗಳನ್ನು ಮುಂದುವರಿಸಿವೆ.

ಉಕ್ರೇನ್​ನಲ್ಲಿ ರಷ್ಯನ್ ಪಡೆಗಳ ದಾಳಿಗೆ ಹಾವೇರಿಯ ನವೀನ್ ಗ್ಯಾನಗೌಡರ್ ಮೃತಪಟ್ಟಿದ್ದಾರೆ. ಸಂಘರ್ಷ ಆರಂಭವಾದ ನಂತರ ಉಕ್ರೇನ್​ನಲ್ಲಿ ಮೃತಪಟ್ಟ ಮೊದಲ ಭಾರತೀಯ ವಿದ್ಯಾರ್ಥಿ ಇವರು. ರಷ್ಯಾ ಬೆದರಿಕೆಗಳಿಗೆ ಸೊಪ್ಪು ಹಾಕದ ಉಕ್ರೇನ್ ತನ್ನಿಂದ ಸಾಧ್ಯವಿರುವ ಎಲ್ಲ ರೀತಿಯಲ್ಲಿಯೂ ಹೋರಾಟ ಮುಂದುವರಿಸಿದ್ದು, ತುರ್ತು ನೆರವಿಗಾಗಿ ವಿಶ್ವ ಸಮುದಾಯದ ಮೊರೆಯಿಟ್ಟಿದೆ. ಪೊಲೆಂಡ್ ಯುದ್ಧವಿಮಾನಗಳನ್ನು ಉಕ್ರೇನ್​ಗೆ ಕಳುಹಿಸಿಕೊಟ್ಟಿದ್ದರೆ ಆಸ್ಟ್ರೇಲಿಯಾ ಸೇರಿದಂತೆ ಹಲವು ದೇಶಗಳು ಹಣಕಾಸು ಮತ್ತು ಮಿಲಿಟರಿ ನೆರವು ಒದಗಿಸಲು ಮುಂದೆ ಬಂದಿವೆ.

ಬೆಂಕಿಯುಂಡೆ ಆಗಿರೋ ಉಕ್ರೇನ್​ನಿಂದ ತಪ್ಪಿಸಿಕೊಂಡು ಬರುತ್ತಿರುವವರ ಜೀವನ ಅಕ್ಷರಶಃ ನರಕವಾಗಿದೆ. ಉಕ್ರೇನ್​ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳು ಸಂಕಷ್ಟ ಪರಿಸ್ಥಿತಿ ಅನುಭವಿಸುತ್ತಿದ್ದಾರೆ. ಈ ನಡುವೆ ರಷ್ಯಾ ದೇಶದ ಟಿವಿ ಚಾನೆಲ್​ಗಳನ್ನು ವಿಶ್ವದ ಹಲವು ದೇಶಗಳು ನಿಷೇಧಿಸಿವೆ, ಮಾತ್ರವಲ್ಲದೆ ರಷ್ಯಾ ವಿರುದ್ಧ ಕಠಿಣ ಅರ್ಥಿಕ ದಿಗ್ಬಂಧನಗಳನ್ನು ವಿಧಿಸಿವೆ. ಆದರೆ ರಷ್ಯಾ ಮಾತ್ರ ಇದ್ಯಾವುದಕ್ಕೂ ಜಗ್ಗುತ್ತಿಲ್ಲ.


Spread the love

About Laxminews 24x7

Check Also

3 ದಿನ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ

Spread the love ಬೆಂಗಳೂರು : ರಾಜ್ಯಕ್ಕೆ ಬರುವ ಅನುದಾನಗಳ ಕುರಿತು ಕೇಂದ್ರಕ್ಕೆ ಮನವಿ ಸಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ