Breaking News

ಕಾಂಗ್ರೆಸ್ ಪಾದಯಾತ್ರೆಗೆ ಹೈಕೋರ್ಟ್​ ಅಸಮಾಧಾನ: ಬೆಂಗಳೂರು ನಗರದಲ್ಲಿ ಪ್ರತಿಭಟನೆ ನಡೆಸದಂತೆ ತಾಕೀತು

Spread the love

ಬೆಂಗಳೂರು: ಮೇಕೆದಾಟು ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಾದಯಾತ್ರೆಗೆ ಹೈಕೋರ್ಟ್​ ಅಸಮಾಧಾನ ವ್ಯಕ್ತಪಡಿಸಿದ್ದು, ಬೆಂಗಳೂರು ನಗರದಲ್ಲಿ ಇನ್ಮುಂದೆ ಯಾವುದೇ ಪ್ರತಿಭಟನೆಗಳನ್ನು ಕೈಗೊಳ್ಳದಂತೆ ಆದೇಶ ಹೊರಡಿಸಿದೆ.

ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಎಸ್.ಆರ್ ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ಪೀಠದಿಂದ ಆದೇಶ ಹೊರಡಿಸಲಾಗಿದೆ. ಫ್ರೀಡಂಪಾರ್ಕ್​​ನಲ್ಲಿ ಪ್ರತಿಭಟನೆ ನಡೆಸುವ ವೇಳೆಯೂ ನಗರದ ಸಾರಿಗೆ-ಸಂಚಾರ ಹಾಗೂ ಜನರ ದಿನನಿತ್ಯದ ಚಟುವಟಿಕೆಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಸರ್ಕಾರಕ್ಕೆ ತಾಕೀತು ಮಾಡಿತು.

ಇಂದು ಹೈಕೋರ್ಟ್ ತಲುಪಲು ನಮಗೇ ಒಂದು ಗಂಟೆ ತಗುಲಿತು. ಜನಸಾಮಾನ್ಯರು ಓಡಾಡುವುದು ಹೇಗೆ? ಎಂದು ಪ್ರಶ್ನಿಸಿದ ಹೈಕೋರ್ಟ್​ ಇದಕ್ಕೆಲ್ಲಾ ನಿರ್ಬಂಧಗಳನ್ನು ವಿಧಿಸಿ ಎಂದು​ ಸರ್ಕಾರಕ್ಕೆ ಸೂಚನೆ ನೀಡಿತು.


Spread the love

About Laxminews 24x7

Check Also

ಪ್ರಧಾನಿ ಮೋದಿ ಒಂದು ದಿನ ತಮ್ಮ ಕೃತ್ಯಗಳಿಗೆ ಪಶ್ಚಾತ್ತಾಪ ಪಡುತ್ತಾರೆ: ಮಲ್ಲಿಕಾರ್ಜುನ ಖರ್ಗೆ

Spread the loveಕಲಬುರಗಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುವಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ