Breaking News

ಹತ್ಯೆಯಾದ ಹರ್ಷ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂ. ಪರಿಹಾರ: ಈಶ್ವರಪ್ಪ

Spread the love

ಶಿವಮೊಗ್ಗ, ಮಾ.3: ಬಜರಂಗದಳ ಕಾರ್ಯಕರ್ತ ಹರ್ಷ ಕಗ್ಗೊಲೆ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದುಃಖ ವ್ಯಕ್ತಪಡಿಸಿದ್ದಾರೆ. ಅವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಕೊಡುವುದಾಗಿ ತಿಳಿಸಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾನುವಾರ ಯಡಿಯೂರಪ್ಪ ಅವರು ಹರ್ಷ ನಿವಾಸಕ್ಕೆ ಭೇಟಿ ನೀಡುತ್ತಾರೆ. ಈ ವೇಳೆ ತಾವು ಮತ್ತು ಯಡಿಯೂರಪ್ಪ ಅವರು ಸರಕಾರದ ಪರವಾಗಿ 25 ಲಕ್ಷ ಪರಿಹಾರ ನೀಡುತ್ತೇವೆ. ವಿಶ್ವನಾಥ ಶೆಟ್ಟಿ ಕೊಲೆಯಾದಾಗ ಅವರ ಕುಟುಂಬಕ್ಕೆ ಬಿಜೆಪಿ ವತಿಯಿಂದ 18 ಲಕ್ಷ ರೂ. ತಲುಪಿಸಿತ್ತು. ಟೀಕೆ ಟಿಪ್ಪಣಿಗಳು ಸ್ವಾಭಾವಿಕ. ಆ ಸಂದರ್ಭದಲ್ಲಿ ನಮ್ಮ ಕರ್ತವ್ಯ ನಾವು ಮಾಡಿದ್ದೇವೆ. ವಿಶ್ವನಾಥ ಶೆಟ್ಟಿ ಕುಟುಂಬಕ್ಕೂ ಸಹ ಹಿಂದೂ ಸಮಾಜ ಏನೇನು ಸಹಾಯ ಮಾಡಬಹುದೋ ಅದನ್ನು ಮಾಡ್ತೇವೆ. ಕೆಲವು ಮುಸಲ್ಮಾನ್ ಗೂಂಡಾಗಳು ಗಾಜನೂರು ಬಳಿ ವಿಶ್ವನಾಥಶೆಟ್ಟಿ ಅವರ ಹತ್ಯೆ ನಡೆಸಿದ್ದರು ಎಂದರು.


Spread the love

About Laxminews 24x7

Check Also

ಅನಾರೋಗ್ಯದಿಂದ ತಾಯಮ್ಮ ಹುಲಿ ಸಾವು

Spread the loveಮೈಸೂರು: ಚಾಮರಾಜೇಂದ್ರ ಮೃಗಾಲಯದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಹೆಣ್ಣು ಹುಲಿ ತಾಯಮ್ಮ ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮುಂಜಾನೆ 3.45ರ ಸಮಯದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ