Breaking News

ರಾಜ್ಯಾದ್ಯಂತ ಗ್ರಾಮ ಒನ್ ಯೋಜನೆ ವಿಸ್ತರಣೆ :ಸಿಎಂ ಬೊಮ್ಮಾಯಿ

Spread the love

ಬೆಂಗಳೂರು: ಗ್ರಾಮ ಒನ್ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸುವುದಾಗಿ ತಿಳಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, 2 ವರ್ಷದಲ್ಲಿ 25 ಲಕ್ಷ ಮನೆಗಳಿಗೆ ನೀರಿನ ಸಂಪರ್ಕ ಕಲ್ಪಿಸುವುದಾಗಿ ಹೇಳಿದ್ದಾರೆ.ಪ್ರಸಕ್ತ ವರ್ಷದಲ್ಲಿ ರಾಜ್ಯದ 1000 ಕೆರೆಗಳ ಅಭಿವೃದ್ಧಿ, ತಲಾ 10 ಲಕ್ಷ ರೂಪಾಯಿ ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಮಾಡಲಾಗುವುದು ಎಂದರು.

 

2022-23ನೇ ಸಾಲಿನ ಬಜೆಟ್ ಮಂಡನೆ ವೇಳೆ, ಕುಡಿಯುವ ನೀರು ಸಂಪರ್ಕಕ್ಕೆ 7 ಸಾವಿರ ಕೋಟಿ ಮೀಸಲಿಡಲಾಗಿದ್ದು, ಗ್ರಾಮೀಣ ಭಾಗದ ರಸ್ತೆಗಳ ಸುಧಾರಣೆಗಾಗಿ 1600 ಕೋಟಿ ರೂ. ನೀಡಲಾಗುತ್ತಿದೆ. ಮಳೆಗಾಲದಲ್ಲಿ ಹಾನಿಯಾದ ರಸ್ತೆ ಅಭಿವೃದ್ಧಿಗೆ 300 ಕೋಟಿ, ಅಮೃತ ಗ್ರಾಮ ಪಂಚಾಯಿತಿ ಯೋಜನೆಗೆ 188 ಕೋಟಿ, 750 ಗ್ರಾಂ.ಪಂಚಾಯತಿಗಳಿಗೆ ತಲಾ 25 ಲಕ್ಷ ಅನುದಾನ ಘೋಷಿಸಿದರು.


Spread the love

About Laxminews 24x7

Check Also

ಬಾಬಾನಗರದ ನೆಲದಲ್ಲಿ ಹೊಸ ಕೃಷಿ ಕ್ರಾಂತಿ; ರೆಡ್ ಡೈಮಂಡ್ ಪೇರಲ ಬೆಳೆದು ಸಚಿವರಿಗೆ ಉಡುಗೊರೆ ನೀಡಿದ ರೈತ*

Spread the love : ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದಲ್ಲಿ ವ್ಯಾಪ್ತಿಯಲ್ಲಿ ಬರುವ ತಿಕೋಟಾ ತಾಲ್ಲೂಕಿನ ಬಾಬಾನಗರದ ನೆಲದಲ್ಲಿ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ