Breaking News

ಬೆಳಗುಂದಿ ಗ್ರಾಮದ ಗಜಾನನ ಬಾಳಾರಾಮ್ ನಾಯ್ಕ ಎಂಬ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿ

Spread the love

ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಗಜಾನನ ಬಾಳಾರಾಮ್ ನಾಯ್ಕ ಎಂಬ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಳಗುಂದಿ ಗ್ರಾಮದ ವಿದ್ಯಾ ಪಾಟೀಲ್, ಆಕೆಯ ಮಗ ರಿತಿಕ್ ಪಾಟೀಲ್ ಹಾಗೂ ಆತನ ಸ್ನೇಹಿತ ಪರುಶರಾಮ್ ಗೋಂಧಳಿ ಬಂಧಿತ ಆರೋಪಿಗಳು. ಕೊಲೆಯಾದ ಗಜಾನನ ನಾಯ್ಕ ಆರೋಪಿ ವಿದ್ಯಾ ಜೊತೆ ಅನೈತಿಕ ಸಂಬಂಧ ಹೊಂದಿದ್ದಲ್ಲದೇ, ಆಕೆಗೆ ಹಣ ಕೊಡುವಂತೆ ಪೀಡಿಸುತ್ತಿದ್ದನಂತೆ. ಇದರಿಂದ ಬೇಸತ್ತ ಮೂವರು ಆರೋಪಿಗಳು ಕೂಡಿಕೊಂಡು ಗಜಾನನ ಮನೆಯಲ್ಲಿಯೇ ಆತನನ್ನು ಕೊಲೆ ಮಾಡಿದ್ದರು. ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಗ್ರಾಮೀಣ ಸಿಪಿಐ ಸುನೀಲಕುಮಾರ್ ನಂದೇಶ್ವರ ನೇತೃತ್ವದ ತಂಡವು ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ಮುಂದುವರಿಸಿದೆ.


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ