Breaking News

ಜೀವನದಲ್ಲಿ ಬೇಸರಗೊಂಡು ಸಾವಿಗೂ ಮೊದಲೇ ಸಮಾಧಿ ಸಿದ್ಧಪಡಿಸಿಕೊಂಡ ವ್ಯಕ್ತಿ!

Spread the love

ದಾವಣಗೆರೆ: ಸಾಮಾನ್ಯವಾಗಿ ವ್ಯಕ್ತಿ ಸಾವನ್ನಪ್ಪಿದ ನಂತರ ಗುಂಡಿ ತೋಡಿ ಮಣ್ಣು ಮಾಡ್ತಾರೆ.

ಆದರೆ ಇಲ್ಲೊಬ್ಬ ವ್ಯಕ್ತಿ ಜೀವನದಲ್ಲಿ ಜುಗುಪ್ಸೆಗೊಂಡು ತನ್ನ ಮರಣಕ್ಕೂ ಮೊದಲೇ ಸಮಾಧಿಯನ್ನು ತಯಾರಿಸಿಕೊಂಡಿದ್ದಾರೆ.

ಹರಿಹರ ತಾಲೂಕಿನ ಜರೇಕಟ್ಟೆ ಗ್ರಾಮದ ನಿವಾಸಿ ತಿಪ್ಪಣ್ಣರಾವ್ ಎಂಬುವವರು ಜೀವನದಲ್ಲಿ ಬೇಸರಗೊಂಡು ಸಾವಿನ ಮೊದಲೇ ಸಮಾಧಿ ನಿರ್ಮಾಣ ಮಾಡಿಕೊಂಡಿದ್ದಾರೆ. 70 ವರ್ಷದ ತಿಪ್ಪಣ್ಣ ಕಳೆದ ಹದಿನೈದು ವರ್ಷಗಳ ಹಿಂದೆಯೇ ಈ ಸಮಾಧಿಯನ್ನು ನಿರ್ಮಾಣ ಮಾಡಿದ್ದು, ಅದಕ್ಕೆ ಮರಳಿ ಮಣ್ಣಿಗೆ ಎಂದು ಹೆಸರಿಟ್ಟಿದ್ದಾರೆ.

ಇನ್ನೊಬ್ಬರ ಹಂಗಿಗಾಗಿ ಕೈಚಾಚುವ ಬದಲು ಸಾಯುವುದೇ ಮೇಲು ಎಂಬ ಮಾತನ್ನು ಪಾಲಿಸುತ್ತಿರುವ ತಿಪ್ಪಣ್ಣರಾವ್, ಯಾರೊಬ್ಬರ ಬಳಿಯೂ ಹಣ ಪಡೆಯದೆ ತಾವೇ ದುಡಿದು ಸಮಾಧಿ ನಿರ್ಮಾಣ ಮಾಡಿಕೊಂಡಿದ್ದಾರೆ. ತಾನು ಅಸುನೀಗಿದ್ರೆ ಇದೇ ಸಮಾಧಿಯಲ್ಲಿ ಹೂಳುವಂತೆ ತಮ್ಮ ಮಕ್ಕಳಿಗೆ ಹೇಳಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ