ಧಾರವಾಡ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಪಾರ್ಕಿಂಗ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಪಾರ್ಕಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ೨ ಕುಟುಂಬಗಳು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಉಣಕಲ್ ಹತ್ತಿರ ನಡೆದಿದೆ.
ಕಳೆದ ಸುಮಾರು ದಿನಗಳಿಂದ ಉಣಕಲ್ ಭಾಗದಲ್ಲಿ ಸರಿಯಾದ ಪಾರ್ಕಿಂಗ್ ವ್ಯವಸ್ಥೆ ಇಲ್ಲದೇ ಜನರು ದಿನವೂ ಹೊಡೆದಾಡುವ ಪ್ರಸಂಗಗಳು ಗೋಚರಿಸುತ್ತವೆ. ಸಾರ್ವಜನಿಕರೊಬ್ಬರು ರಸ್ತೆ ಮುಂದಿನ ಮನೆಯ ಮುಂದೆ ಕಾರ್ ಪಾರ್ಕ್ ಮಾಡಿ ಹೋಟೆಲ್ಗೆ ಹೋಗಿದ್ದಾರೆ.
ಈ ವೇಳೆ ಇದಕ್ಕೆ ಕೋಪಗೊಂಡ ಮನೆಯವರು ಕಾರಿನ ಗ್ಲಾಸ್ ಒಡೆದು ಕಾರ್ ಚಾಲಕನಿಗೆ ಹೊಡೆದಿದ್ದಾರೆ. ಬಳಿಕ ಕಾರ್ ಚಾಲಕ ಪುನಃ ತನ್ನ ಸ್ನೇಹಿತರ ಜೊತೆಗೆ ಬಂದು ಜಗಳ ತಗೆದಿದ್ದಾನೆ. ಇಬ್ಬರ ನಡುವೆ ಮಾತಿನ ಚಕಮಕಿ ಉಂಟಾಗಿ ದೊಣ್ಣೆಯಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.