ಮೊಹಾಲಿ(ಪಂಜಾಬ್): ಪಂಜಾಬ್ನಲ್ಲಿ ಕಾಂಗ್ರೆಸ್ ಸೇರಿದಂತೆ ಇತರೆ ಪಕ್ಷಗಳ ವಿರುದ್ಧ ಭರ್ಜರಿ ಗೆಲುವು ದಾಖಲು ಮಾಡುವಲ್ಲಿ ಯಶಸ್ವಿಯಾಗಿರುವ ಆಮ್ ಆದ್ಮಿ ಪಕ್ಷ ಮಾರ್ಚ್ 16ರಂದು ಸರ್ಕಾರ ರಚನೆ ಮಾಡಲಿದೆ. ಆಪ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಭಗವಂತ್ ಮನ್, ನೂತನ ಶಾಸಕರಿಗೆ ಮಹತ್ವದ ಸಲಹೆ ನೀಡಿದ್ದಾರೆ.
ಮೊಹಾಲಿಯಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಅಹಂಕಾರಕ್ಕೊಳಗಾಗಬೇಡಿ, ನಮಗೆ ಮತ ನೀಡದವರನ್ನೂ ನಾವು ಗೌರವಿಸಬೇಕು. ಚಂಡೀಗಢದಲ್ಲಿ ಕಾಲ ಕಳೆಯುವ ಬದಲಿಗೆ ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಉಳಿದುಕೊಂಡು ಕೆಲಸ ಮಾಡುವಂತೆ ಮನವಿ ಮಾಡಿದ್ದಾರೆ.