Breaking News

ಗ್ರಾಮ ಪಂಚಾಯಿತಿಗೊಂದು ಗ್ರಾಮಒನ್: ರಾಜ್ಯಾದ್ಯಂತ ವಿಸ್ತರಿಸಲು ಸಂಪುಟ ಒಪ್ಪಿಗೆ

Spread the love

ಬೆಂಗಳೂರು: ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರ ಅಲೆದಾಟ ತಪ್ಪಿಸಲು ಹಂತಹಂತವಾಗಿ ಅನುಷ್ಠಾನ ಮಾಡುತ್ತಿರುವ ಗ್ರಾಮ ಒನ್ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ. ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಇ-ಆಡಳಿತ)ಯಿಂದ ಅನುಷ್ಠಾನವಾಗುತ್ತಿರುವ ಯೋಜನೆಯನ್ನು ಎಲ್ಲ ಗ್ರಾಮಗಳಿಗೂ ವಿಸ್ತರಿಸಬೇಕೆಂದು ತೀರ್ವನಿಸಲಾಯಿತು.

 

ನಮ್ಮ ಸರ್ಕಾರ ಗ್ರಾಮೀಣ ಜನರಿಗೆ ಪಂಚಾಯಿತಿ ಹಂತದಲ್ಲಿಯೇ ನಾಗರಿಕ ಸೇವೆಗಳನ್ನು ಒದಗಿಸುವ ಗ್ರಾಮ ಒನ್ ಯೋಜನೆಯನ್ನು ಜಾರಿಗೊಳಿಸಿದೆ. ತಂತ್ರಜ್ಞಾನ ಆಧಾರಿತ ಈ ಕಾರ್ಯಕ್ರಮ ಹೆಚ್ಚು ಪಾರದರ್ಶಕ ಹಾಗೂ ಜನಸ್ನೇಹಿಯಾಗಿದೆ. ಜನರ ಅಲೆದಾಟ ತಪ್ಪಿಸಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಭಾಷಣದಲ್ಲಿ ಹೇಳಿಕೊಂಡಿದ್ದರು. 


Spread the love

About Laxminews 24x7

Check Also

ಶಿವಾನಂದ ಗ್ರಾಮೀಣ ವಿದ್ಯಾಪೀಠ ಜ್ಞಾನ ಶಿವಾನಂದ ಗ್ರಾಮೀಣ ವಿದ್ಯಾಪೀಠ ಜ್ಞಾನಕೇಂದ್ರವಾಗಿ ಬೆಳೆಯಲಿ: ಸಚಿವ ಸತೀಶ್‌ ಜಾರಕಿಹೊಳಿ: ಸಚಿವ ಸತೀಶ್‌ ಜಾರಕಿಹೊಳಿ

Spread the loveಹುಕ್ಕೇರಿ: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯಲೆಂಬ ಉದ್ದೇಶದಿಂದ ಶಿವಾನಂದ ಗ್ರಾಮೀಣ ವಿದ್ಯಾಪೀಠಕ್ಕೆ 9 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ