Breaking News

6 ವರ್ಷಗಳ ಬಳಿಕ ತಾಯಿ, ಮಗನನ್ನು ಒಂದಾಗಿಸಿದ ಆಧಾರ್ ಕಾರ್ಡ್

Spread the love

ಬೆಂಗಳೂರು:  ಆರು ವರ್ಷಗಳ ಬಳಿಕ ತಾಯಿ ಮತ್ತು ಮೂಕ ಮಗನನ್ನು ಆಧಾರ್ ಕಾರ್ಡ್ ಒಂದು ಮಾಡಿರುವ ಪ್ರಸಂಗ ಬೆಂಗಳೂರಿನಲ್ಲಿ ನಡೆದಿದೆ.

 

2016ರ ಮಾರ್ಚ್‍ನಲ್ಲಿ ಪಾರ್ವತಮ್ಮ ಅವರ ಜೊತೆ ತರಕಾರಿ ಮಾರಾಟಕ್ಕೆ ಭರತ್ ಬಂದಿದ್ದರು. ಆಗ ಭರತ್ ಕೇವಲ 13 ವರ್ಷದವರಾಗಿದ್ದರು. ಈ ವೇಳೆ ನಿಗೂಢವಾಗಿ ಭರತ್ ಕಣ್ಮೆರೆಯಾಗಿದ್ದಾರೆ. ಮೂಗ ಮಗನನ್ನು ಕಾಣದೇ ಕಂಗಲಾಗಿ, ಯಲಹಂಕದ ರೈತ ಸಂತೆಯಲ್ಲಿ ಪಾರ್ವತಮ್ಮ ಅವರು ಹುಡುಕಾಟ ನಡೆಸಿ, ಕೊನೆಗೆ ಈ ಬಗ್ಗೆ ಯಲಹಂಕ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್ ಪ್ರಕರಣ ದಾಖಲಿಸಿದ್ದರು. ಕಾಣೆಯಾದ ಪುತ್ರನಿಗೆ ಹಂಬಲಿಸಿ ಕಂಡ, ಕಂಡ ದೇವರಿಗೆಲ್ಲ ಹರಕೆ ಹೊತ್ತಿದ್ದರು. 

ಯಲಹಂಕದಿಂದ ತಪ್ಪಿಸಿಕೊಂಡ ಭರತ್ ಹತ್ತು ತಿಂಗಳ ಬಳಿಕ ನಾಗ್ಪುರ ರೈಲ್ವೆ ನಿಲ್ದಾಣ ತಲುಪಿದ್ದು, ಈ ವೇಳೆ ದಿಕ್ಕು ಕಾಣದೇ ಕಂಗೆಟ್ಟು ಓಡಾಡುತ್ತಿದ್ದ ಭರತ್‍ನನ್ನು ಕಂಡು ರೈಲ್ವೆ ಭದ್ರತಾ ಪಡೆ ಅಧಿಕಾರಿಗಳು ರಕ್ಷಿಸಿದ್ದರು. 6 ವರ್ಷಗಳಿಂದ ಆಶ್ರಯ ಪಡೆದಿದ್ದ ಭರತ್‍ಗೆ ಆಧಾರ್ ಕಾರ್ಡ್ ಮಾಡಿಸಲು ಪುನರ್ ವಸತಿ ಕೇಂದ್ರದ ಅಧಿಕಾರಿಗಳು ನಿರ್ಧರಿಸಿ, 2022ರ ಜನವರಿಯಲ್ಲಿ ಸ್ಥಳೀಯ ಆಧಾರ್ ಸೇವಾ ಕೇಂದ್ರಕ್ಕೆ ಭರತ್‍ನನ್ನು ಮಹೇಶ್ ಎಂಬ ಅಧಿಕಾರಿ ಕರೆದೊಯ್ದಿದ್ದರು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ