Breaking News

ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಿಲ್ಲಲ್ಲ: ಸಿದ್ದರಾಮಯ್ಯ

Spread the love

ಮಂಡ್ಯ: ನಾನು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಚಾಮುಂಡೇಶ್ವರಿಯಲ್ಲಿ ಸ್ಪರ್ಧೆ ಮಾಡಲ್ಲ. ನನಗೆ ನಾಲ್ಕೈದು ಕ್ಷೇತ್ರಗಳಿಂದ ಸ್ಪರ್ಧಿಸಲು ಆಹ್ವಾನ ಬಂದಿದೆ. ನಾನು ಇನ್ನೂ ಎಲ್ಲಿ ನಿಲ್ಲಬೇಕೆಂದು ನಿರ್ಧಾರ ಮಾಡಿಲ್ಲ. ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಿಲ್ಲಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ನನ್ನ ಪ್ರಕಾರ ಅವಧಿಗೂ ಮುನ್ನ ಚುನಾವಣೆ ಬರಲ್ಲ. ಈ ಬಗ್ಗೆ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ, ಸಿಟಿ ರವಿ ಸೇರಿದಂತೆ ಹಲವಾರು ನಾಯಕರು ಹೇಳಿದ್ದಾರೆ. ಅವಧಿಗೂ ಮುನ್ನ ಚುನಾವಣೆ ಯಾಕೆ ಮಾಡುತ್ತಾರೆ. ಚುನಾವಣೆ ಇರುವುದು ಏಪ್ರಿಲ್‍ನಲ್ಲಿ. ಇದೆಲ್ಲ ಊಹಾಪೋಹಗಳಷ್ಟೇ. ಒಂದು ವೇಳೆ ಅವಧಿಗೂ ಮುನ್ನ ಚುನಾವಣೆ ಬಂದರೆ ನಾವು ಸಿದ್ಧರಾಗಿದ್ದೇವೆ. ಜನರು ನಮ್ಮ ಪರವಾಗಿದ್ದಾರೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ