Breaking News

ಮುಂಬರುವ ದಿನಗಳಲ್ಲಿ ಕಾಂಗ್ರೆಸ್​​ಗೆ ಇನ್ನೂ ಹೀನಾಯ ಸ್ಥಿತಿ‌ ಬರುತ್ತದೆ: ಗೋವಿಂದ ಕಾರಜೋಳ

Spread the love

ಬಾಗಲಕೋಟೆ: ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯ ಸೋಲು ಕಂಡಿದೆ. ಮುಂಬರುವ ದಿನಗಳಲ್ಲಿ ಕಾಂಗ್ರೆಸ್​​ಗೆ ಇನ್ನೂ ಹೀನಾಯ ಸ್ಥಿತಿ‌ ಬರುತ್ತದೆ ಎಂದು ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಕಾಂಗ್ರೆಸ್​ ನಾಯಕರು ವಿಶೇಷ ಫ್ಲೈಟ್ ಮಾಡಿಕೊಂಡು ಗೋವಾ, ಉತ್ತರಾಖಂಡ್​ಗೆ ಹೋಗಿದ್ದರು. ಬಾಡಿಗೆ ಕೊಟ್ಟು ವಾಪಸ್ ಬಂದಿದ್ದಾರೆ. ಕಾಂಗ್ರೆಸ್​ ಪರಿಸ್ಥಿತಿ ಇನ್ನೂ ಹೀನಾಯವಾಗುತ್ತದೆ. ಇಲ್ಲವಾದಲ್ಲಿ ನನ್ನ ಹೆಸರು ಗೋವಿಂದ ಕಾರಜೋಳ ಅಲ್ಲ ಎಂದು‌ ಟಾಂಗ್ ನೀಡಿದರು.

ಯಾವುದೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರಲ್ಲ: ಐದು ರಾಜ್ಯದ ಚುನಾವಣೆ ಬರುವ ಮುನ್ನ ನಾನು ಹೇಳಿದ್ದೆ, ಈಗಲೂ ಹೇಳುತ್ತೇನೆ 2024ರ ನಂತರ ದೇಶದಲ್ಲಿ ಯಾವುದೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರೋಕೆ ಸಾಧ್ಯವಿಲ್ಲ ಎಂದು ಭವಿಷ್ಯ ನುಡಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ