Breaking News

ಕೊರೊನಾ ವಿರುದ್ಧ 26 ಗಂಟೆ ಹೋರಾಡಿ ಪ್ರಾಣಬಿಟ್ಟ 6 ತಿಂಗಳ ಕಂದಮ್ಮ…

Spread the love

ಚಂಡೀಗಢ: ಮಹಾಮಾರಿ ಕೊರೊನಾ ವಿರುದ್ಧ 26 ಗಂಟೆಗಳ ಹೋರಾಡಿ 6 ತಿಂಗಳ ಕಂದಮ್ಮವೊಂದು ಮೃತಪಟ್ಟ ಮನಕಲಕುವ ಘಟನೆ ಇಂದು ಚಂಡೀಗಢದಲ್ಲಿ ನಡೆದಿದೆ.

ಹೃದಯ ರಂಧ್ರದ ಚಿಕಿತ್ಸೆಗಾಗಿ 6 ತಿಂಗಳ ಹೆಣ್ಣು ಮಗುವನ್ನು ಚಂಡೀಗಢದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಮಗುವಿಗೆ ಸೋಂಕ ತಗುಲಿರುವುದು ದೃಢಪಡುತ್ತಿದ್ದಂತೆ ಅಂದ್ರೆ ಬುಧವಾರ ಬೆಳಗ್ಗೆ 11 ಗಂಟೆಗೆ ಕೋವಿಡ್-19 ವಾರ್ಡಿಗೆ ದಾಖಲಿಸಲಾಗಿತ್ತು. ರಾತ್ರಿಯಿಂದಲೇ ಮಗುವನ್ನು ವೆಂಟಿಲೇಟರ್ ಮತ್ತು ಗ್ಲೂಕೋಸ್‍ನಲ್ಲಿ ಇಡಲಾಗಿತ್ತು. ಆದರೆ ಸೋಂಕು ತೀವ್ರವಾಗಿ ಏರಿಕೆ ಕಂಡು ಕಂದಮ್ಮ ಪ್ರಾಣಬಿಟ್ಟದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಮಗು ಜನಿಸಿದಾಗ ಎರಡೂವರೆ ಕೆಜಿ ಇತ್ತು. ನಂತರ 6 ತಿಂಗಳ ಕಳೆದರೂ ತೂಕವು 3 ಕೆಜಿಗಿಂತ ಹೆಚ್ಚಾಗಲಿಲ್ಲ. ಹೀಗಾಗಿ ಪೋಷಕರು ಮಗುವನ್ನು ಜಲಂಧರ್‍ನ ಅಪೊಲೊ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿ 36 ದಿನಗಳವರೆಗೆ ಚಿಕಿತ್ಸೆ ಕೊಡಿಸಿದ್ದರು. ಆದರೆ ಮಗುವಿಗೆ ಹೃದಯ ಸಂಬಂಧಿ ಕಾಯಿಲೆ ಇರುವುದನ್ನು ಅರಿತ ಅಪೊಲೊ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಪಿಜಿಐಗೆ ದಾಖಲಿಸುವಂತೆ ಸಲಹೆ ನೀಡಿದರು. ಹೀಗಾಗಿ ಪೋಷಕರು ಏಪ್ರಿಲ್ 9ರಂದು ಅಂಬುಲೆನ್ಸ್ ಮೂಲಕ ಪಿಜಿಐಗೆ ಕರೆದಂತಿದ್ದರು.

ಚಿಕಿತ್ಸೆ ಆರಂಭಿಸಿದ ವೈದ್ಯರು ಮಗುವಿನ ಹೃದಯದಲ್ಲಿ ರಂಧ್ರವಿದೆ, ಶಸ್ತ್ರ ಚಿಕಿತ್ಸೆ ಮಾಡಬೇಕು ಎಂದು ತಿಳಿಸಿದ್ದರು. ಆದರೆ ಶಸ್ತ್ರಚಿಕಿತ್ಸೆಗೂ ಮುನ್ನವೇ ಮಗುವಿಗೆ ಸೋಂಕು ತಗುಲಿತ್ತು. ಮಗುವಿಗೆ ಜ್ವರದ ಲಕ್ಷಣಗಳು ಇರಲಿಲ್ಲ. ಆದರೆ ಕೈ-ಕಾಲು ಸೇರಿದಂತೆ ದೇಹದ ಭಾಗಗಳು ಪ್ರತಿಕ್ರಿಯಿಸುವುದನ್ನು ನಿಲ್ಲಿಸಿದ್ದವು.

ತಾಯಿ-ತಂದೆ ಕೊರೊನಾ ಬಂದಿಲ್ಲ:
ವೆಂಟಿಲೇಟರ್ ಮೇಲೆ ಇರಿಸಿದ್ದ ಮಗಳನ್ನು ನೋಡಲು ತಾಯಿ ಹೋಗಿದ್ದರು. ಮಗುವಿನ ತಂದೆ ರಾಮು ಮತ್ತು ತಾಯಿ ಇಬ್ಬರೂ ಕೊರೊನಾ ಟೆಸ್ಟ್‍ಗೆ ಒಳಗಾಗಿದ್ದರು. ಆದರೆ ಅವರ ರಿಪೋರ್ಟ್ ನಲ್ಲಿ ಸೋಂಕು ದೃಢಪಟ್ಟಿಲ್ಲ. ಅಜ್ಜಿ ಮತ್ತು ಅಜ್ಜಗೂ ಕೊರೊನಾ ಟೆಸ್ಟ್ ಮಾಡಲಾಗಿದೆ. ಅವರಲ್ಲಿಯೂ ಸೋಂಕು ಕಂಡುಬಂದಿಲ್ಲ. ಹೀಗಾಗಿ ಮಗುವಿಗೆ ಕೊರೊನಾ ಹೇಗೆ ಹರಡಿದೆ ಎಂಬ ಪ್ರಶ್ನೆ ಉದ್ಭವಿಸಿದೆ.

ಹೆಣ್ಣು ಮಗುವಿನೊಂದಿಗೆ ಸಂಪರ್ಕ ಹೊಂದಿದ್ದ 18 ವೈದ್ಯರು, ಎಚ್‍ಎ ಮತ್ತು ಎಕ್ಸರೆ ತಂತ್ರಜ್ಞರು ಸೇರಿದಂತೆ 54 ಮಂದಿ ಆಸ್ಪತ್ರೆಯ ಉದ್ಯೋಗಿಗಳ ರಿಪೋರ್ಟ್ ನೆಗೆಟಿವ್ ಬಂದಿದೆ. ಪಿಜಿಐ ಬುಧವಾರ 18 ವೈದ್ಯರನ್ನು ಪ್ರತ್ಯೇಕಿಸಿ ಪ್ರತ್ಯೇಕ ವಾರ್ಡಿಗೆ ದಾಖಲಿಸಿದೆ. ಉಳಿದ ಸಿಬ್ಬಂದಿಯ ವರದಿ ನೆಗೆಟಿವ್ ಬಂದಿದ್ದರಿಂದ ಅವರನ್ನು ಮನೆಗೆ ಕಳುಹಿಸಿದೆ


Spread the love

About Laxminews 24x7

Check Also

ಅಜಿತ್ ಪವಾರ್ ವಿಮಾನ ದುರಂತ: ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ..! ಮಹಾರಾಷ್ಟ್ರದ ರಾಜಕೀಯ ಧ್ರುವತಾರೆ, ಉಪಮುಖ್ಯಮಂತ್ರಿ ಅಜಿತ್ ಪವಾರ್(Ajit Pawar) ಅವರ ಅಕಾಲಿಕ ನಿಧನಕ್ಕೆ ಕಾರಣವಾದ ಬೊಂಬಾರ್ಡಿಯರ್ ಲಿಯರ್‌ಜೆಟ್ 45 ವಿಮಾನ ಅಪಘಾತದ ಪ್ರಾಥಮಿಕ ತನಿಖಾ ವರದಿ ಹೊರಬಿದ್ದಿದೆ. ದುರಂತಕ್ಕೆ ಕಾರಣವಾದ ಕೆಲವು ಮಹತ್ವದ ಅಂಶಗಳು ಬೆಳಕಿಗೆ ಬಂದಿವೆ. ಜನವರಿ 28ರ ಬುಧವಾರ ಬೆಳಿಗ್ಗೆ ಸಂಭವಿಸಿದ ಈ ಭೀಕರ ಘಟನೆಯು ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ದುರಂತದ ಹಿಂದಿನ ಪ್ರಮುಖ ಕಾರಣಗಳು: ದೃಶ್ಯಮಾನತೆ ಮತ್ತು ತಾಂತ್ರಿಕ ದೋಷ..? ತನಿಖಾ ಮೂಲಗಳ ಪ್ರಕಾರ, ಅಪಘಾತಕ್ಕೆ ಎರಡು ಪ್ರಮುಖ ಕಾರಣಗಳನ್ನು ಗುರುತಿಸಲಾಗಿದೆ. ಕಡಿಮೆ ದೃಶ್ಯಮಾನತೆ: ಬಾರಾಮತಿ ವಿಮಾನ ನಿಲ್ದಾಣದಲ್ಲಿ ಇಳಿಯುವ ಸಮಯದಲ್ಲಿ ರನ್‌ವೇ ಮೇಲೆ ದಟ್ಟವಾದ ಮಂಜು ಕವಿದಿತ್ತು. ದೃಶ್ಯಮಾನತೆ ತೀರಾ ಕಡಿಮೆ ಇದ್ದರೂ ಸಹ, ವಿಮಾನವನ್ನು ಲ್ಯಾಂಡಿಂಗ್ ಮಾಡಲು ನಿರ್ಧರಿಸಿದ್ದು ಈ ದುರಂತಕ್ಕೆ ಒಂದು ಮುಖ್ಯ ಕಾರಣವೆಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ. ಪೈಲಟ್‌ಗಳು ಎರಡನೇ ಬಾರಿ ಲ್ಯಾಂಡಿಂಗ್‌ಗೆ ಪ್ರಯತ್ನಿಸುತ್ತಿದ್ದಾಗ ವಿಮಾನವು ನಿಯಂತ್ರಣ ತಪ್ಪಿ ಬೆಂಕಿ ಹೊತ್ತಿಕೊಂಡಿದೆ.

Spread the loveಮಹಾರಾಷ್ಟ್ರದ ರಾಜಕೀಯ ಧ್ರುವತಾರೆ, ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಕಾಲಿಕ ನಿಧನಕ್ಕೆ ಕಾರಣವಾದ ಬೊಂಬಾರ್ಡಿಯರ್ ಲಿಯರ್‌ಜೆಟ್ 45 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ