Breaking News

ಪೊಲೀಸರ ಗಮನ ಬೇರೆಡೆ ಸೆಳೆದು ಚಾರಣಾಧೀನ ಖೈದಿ ಒಬ್ಬ ಕಾರಾಗೃಹದಿಂದಲೇ ಪರಾರಿ

Spread the love

ಗಲಾಟೆ, ಜಾತಿನಿಂದನೆ ಸೇರಿದಂತೆ ಒಟ್ಟು 6 ಪ್ರಕರಣದಲ್ಲಿ ಆತ ಭಾಗಿಯಾಗಿದ್ದ. ಇದೀಗ ಜೈಲು ಸೇರಿ 15 ದಿನಗಳಲ್ಲೇ ಆರೋಪಿ ಪರಾರಿ ಆಗಿದ್ದಾನೆ. ಪೊಲೀಸರ ಗಮನ ಬೇರೆಡೆ ಸೆಳೆದು ತಪ್ಪಿಸಿಕೊಂಡಿದ್ದಾನೆ.ಬೆಳಗಾವಿ: ವಿಚಾರಣಾಧೀನ ಖೈದಿ ಒಬ್ಬ ಕಾರಾಗೃಹದಿಂದಲೇ ಪರಾರಿ ಆದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಕಾರಾಗೃಹದಲ್ಲಿ ನಡೆದಿದೆ.

ಖೈದಿ ಖಾದಿರಸಾಬ್ ರಾಜೇಖಾನ್ (34) ಎಂಬಾತ ಜೈಲಿನಿಂದಲೇ ಪರಾರಿ ಆಗಿದ್ದಾನೆ. ಜೈಲು ಸಿಬ್ಬಂದಿ ಗಮನ ಬೇರೆಡೆ ಸೆಳೆದು ಸಬ್ ಜೈಲಿನ ಮುಖ್ಯ ದ್ವಾರದಿಂದಲೇ ಆರೋಪಿ ಎಸ್ಕೇಪ್ ಆಗಿದ್ದಾನೆ. ಕೀ ಓಪನ್ ಮಾಡಿಕೊಂಡು ವಿಚಾರಣಾಧೀನ ಕೈದಿ ಪರಾರಿ ಆಗಿದ್ದು ಹೆಚ್ಚುವರಿ ಎಸ್​ಪಿ ಮಾನಿಂಗ ನಂದಗಾವಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಆರೋಪಿ ಖಾದಿರಸಾಬ್ ರಾಜೇಖಾನ್​ನನ್ನು 15 ದಿನದ ಹಿಂದೆ ಬಂಧಿಸಲಾಗಿತ್ತು. ಕೊಲೆ ಯತ್ನ, ಗಲಾಟೆ, ಜಾತಿನಿಂದನೆ ಸೇರಿದಂತೆ ಒಟ್ಟು 6 ಪ್ರಕರಣದಲ್ಲಿ ಆತ ಭಾಗಿಯಾಗಿದ್ದ. ಇದೀಗ ಜೈಲು ಸೇರಿ 15 ದಿನಗಳಲ್ಲೇ ಆರೋಪಿ ಪರಾರಿ ಆಗಿದ್ದಾನೆ. ಪೊಲೀಸರ ಗಮನ ಬೇರೆಡೆ ಸೆಳೆದು ತಪ್ಪಿಸಿಕೊಂಡಿದ್ದಾನೆ.

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ