Breaking News

ಗೋಮಾಂಸ ಸಾಗಿಸುತ್ತಿದ್ದಾನೆಂದು ಶಂಕಿಸಿ ಹಿಗ್ಗಾಮುಗ್ಗಾ ಥಳಿಸಿದ್ರು

Spread the love

ಲಕ್ನೋ: ದನದ ಮಾಂಸ ಸಾಗಿಸುತ್ತಿದ್ದಾನೆ ಎನ್ನುವ ಶಂಕೆಯಿಂದ ವಾಹನ ಚಾಲಕನಿಗೆ ಉತ್ತರ ಪ್ರದೇಶದ ಮಥುರಾ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಮೊಹಮ್ಮದ್ ಅಮೀರ್ (35) ಥಳಿತಕ್ಕೊಳಗಾದವರಾಗಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಮಥುರಾದ ರಾಲ್ ಗ್ರಾಮದಲ್ಲಿ ನಡೆದಿದೆ. ಪಿಕ್-ಅಪ್ ವ್ಯಾನ್‌ನಲ್ಲಿ  ಗೋಮಾಂಸ ಮತ್ತು ದನಗಳನ್ನು ಕಳ್ಳಸಾಗಣೆ ಮಾಡುತ್ತಿದ್ದಾನೆ ಎಂದು ಶಂಕಿಸಿ ಥಳಿಸಿದ್ದಾರೆ.ಮೊಹಮ್ಮದ್ ಅಮೀರ್ ವಾಹನ ಚಲಾಯಿಸಿಕೊಂಡು ಮಥುರಾದ ಗೋವರ್ಧನದಿಂದ ಹತ್ರಾಸ್‍ನಲ್ಲಿರುವ ಸಿಕಂದರಾವ್ ಕಡೆಗೆ ಹೋಗುತ್ತಿದ್ದನು. ಕೆಲವು ಸ್ಥಳೀಯರು ಗುಂಪು ವ್ಯಾನ್‍ನನ್ನು ತಡೆದರು. ಗೋ ಮಾಂಸ ಸಾಗಾಟ ಮಾಡುತ್ತಾನೆ ಎಂದು ಅನುಮಾನಿಸಿ ಚಾಲಕನಿಗೆ ಮನಬಂದಂತೆ ಥಳಿಸಿದ್ದಾರೆ.


Spread the love

About Laxminews 24x7

Check Also

ಶಿವಾನಂದ ಗ್ರಾಮೀಣ ವಿದ್ಯಾಪೀಠ ಜ್ಞಾನ ಶಿವಾನಂದ ಗ್ರಾಮೀಣ ವಿದ್ಯಾಪೀಠ ಜ್ಞಾನಕೇಂದ್ರವಾಗಿ ಬೆಳೆಯಲಿ: ಸಚಿವ ಸತೀಶ್‌ ಜಾರಕಿಹೊಳಿ: ಸಚಿವ ಸತೀಶ್‌ ಜಾರಕಿಹೊಳಿ

Spread the loveಹುಕ್ಕೇರಿ: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯಲೆಂಬ ಉದ್ದೇಶದಿಂದ ಶಿವಾನಂದ ಗ್ರಾಮೀಣ ವಿದ್ಯಾಪೀಠಕ್ಕೆ 9 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ