Breaking News

ಅರಣ್ಯ ಸಚಿವ ಉಮೇಶ್​ ಕತ್ತಿ ತವರು ಜಿಲ್ಲೆ ಬೆಳಗಾವಿಯಲ್ಲಿ ಖದೀಮರಿಂದ ಜಪ್ತಿ ಮಾಡಲಾಗಿದ್ದ ಅರಣ್ಯ ಸಂಪತ್ತು ಕಳ್ಳತನ

Spread the love

ಬೆಳಗಾವಿ : ಅರಣ್ಯ ಸಚಿವ ಉಮೇಶ್​ ಕತ್ತಿ ತವರು ಜಿಲ್ಲೆ ಬೆಳಗಾವಿಯಲ್ಲಿ ಖದೀಮರಿಂದ ಜಪ್ತಿ ಮಾಡಲಾಗಿದ್ದ ಅರಣ್ಯ ಸಂಪತ್ತು ಕಳ್ಳತನವಾಗಿರುವ ಘಟನೆ ನಡೆದಿದೆ.

ನಗರದ ಆರ್‌ಎಫ್‌ಒ ಕಚೇರಿ ಆವರಣದ ಗೋದಾಮಿನಲ್ಲಿ 2019-20ನೇ ಸಾಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ವಿವಿಧ ಅರಣ್ಯ ಸಂಪತ್ತನ್ನು ಇಲಾಖೆ ಸಿಬ್ಬಂದಿ ಜಪ್ತಿ ಮಾಡಿ ಗೋದಾಮಿನಲ್ಲಿ ಇಟ್ಟಿದ್ದರು.

 

complaint copy

ಶ್ರೀಗಂಧ, ನೀರಗಂಧ, ಗುವಾಡಾ ಸೇರಿದಂತೆ ವಿವಿಧ ಜಾತಿಯ ಕಟ್ಟಿಗೆ ತುಂಡು, ವನ್ಯ ಮೃಗಗಳ ಚರ್ಮ, ಕೊಂಬು ಸೇರಿ ಸಾಗಾಟಕ್ಕೆ ಬಳಸಿದ ವಾಹನಗಳು ಹಾಗೂ ಆಯುಧಗಳನ್ನು ಸಂಗ್ರಹಿಸಿಟ್ಟಿದ್ದರು.ಫೆಬ್ರವರಿ 12ರಂದು ಇಲಾಖೆ ಅಧಿಕಾರಿಗಳು ಒಮ್ಮೆ ಹೋಗಿ ಗೋದಾಮಿನಲ್ಲಿದ್ದ ವಸ್ತುಗಳನ್ನು ಪರಿಶೀಲಿಸಿದ್ದರು. ಇದಾದ 10 ದಿನಗಳ ಬಳಿಕ ಗೋದಾಮಿಗೆ ಹೋಗಿ ನೋಡಿದಾಗ ಕಳ್ಳತನವಾಗಿರುರುವುದು ಪತ್ತೆಯಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ನಡೆ ತೀವ್ರ ಅನುಮಾನಕ್ಕೆ ಎಡೆ ಮಾಡಿ‌ಕೊಟ್ಟಿದೆ.


Spread the love

About Laxminews 24x7

Check Also

ಲಿಂಗಾಯತ ಮತ್ತು ಮುಸ್ಲಿಂ ಧರ್ಮ ಒಂದೇ ಅನ್ನೋದು ತಪ್ಪು: ಪಂಡಿತಾರಾಧ್ಯಶ್ರೀ ಅಭಿಪ್ರಾಯ ವಿರೋಧಿಸಿದ ವಚನಾನಂದಶ್ರೀ

Spread the loveಚಿತ್ರದುರ್ಗ, ಸೆಪ್ಟೆಂಬರ್ 7: ಲಿಂಗಾಯತ ಮತ್ತು ಮುಸ್ಲಿಂ ಧರ್ಮ ಒಂದೇ ಎಂಬರ್ಥದಲ್ಲಿ ಸಾಣೇಹಳ್ಳಿ ತರಳಬಾಳು ಮಠದ ಪಂಡಿತಾರಾಧ್ಯ ಶ್ರೀಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ