ಬೆಳಗಾವಿ: ವಿವಾದಾತ್ಮಕ ಟ್ವೀಟ್ ಮೂಲಕ ಶಿವಸೇನೆ ನಾಯಕ ಸಂಜಯ್ ರಾವತ್ ಮತ್ತೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ದಿ ಕಾಶ್ಮೀರ್ ಫೈಲ್ಸ್ ಚಿತ್ರದ ಬಗ್ಗೆ ಪರ ವಿರೋಧ ಚರ್ಚೆ ಮಧ್ಯೆಯೇ ಟ್ವಿಟರ್ನಲ್ಲಿ ಸಂಜಯ್ ರಾವತ್ ಬೆಳಗಾವಿ ಫೈಲ್ಸ್ ಎಂದು ಪೋಸ್ಟ್ ಮಾಡಿದ್ದು, ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಬೆಳಗಾವಿ ಫೈಲ್ಸ್ ಎಂದು ವ್ಯಂಗ್ಯದ ಚಿತ್ರವನ್ನು ರಾವತ್ ಪೋಸ್ಟ್ ಮಾಡಿದ್ದಾರೆ. ಬೆಳಗಾವಿ ಫೈಲ್ಸ್ ಏನು ಕಡಿಮೆ ಇದೆಯಾ? ಪ್ರಜಾಪ್ರಭುತ್ವದ ಹತ್ಯೆ ಎಂಬ ಬರಹ ಇರುವ ಚಿತ್ರವನ್ನು ಪೋಸ್ಟ್ ಮಾಡಲಾಗಿದೆ. ಪೋಸ್ಟ್ ಮೂಲಕ ಬೆಳಗಾವಿಯಲ್ಲಿರುವ ಮರಾಠಿಗರ ಮೇಲೆ ದೌರ್ಜನ್ಯ ಆಗುತ್ತಿದೆ ಎಂದು ಬಿಂಬಿಸುವ ಯತ್ನವನ್ನು ರಾವತ್ ಮಾಡಿದ್ದಾರೆ. ಪರಿಣಾಮ ರಾವತ್ ವಿರುದ್ಧ ಬೆಳಗಾವಿಯಲ್ಲಿ ಆಕ್ರೋಶ ಭುಗಿಲೆದ್ದಿದೆ.