Breaking News

ಸ್ಕೂಟಿಯಲ್ಲಿ ಬರುತ್ತಿದ್ದಾಗಲೇ ಟ್ರಾನ್ಸ್​ಫಾರ್ಮರ್​ ಸ್ಫೋಟ: ಚಿಕಿತ್ಸೆ ಫಲಿಸದೇ ಅಪ್ಪ, ಮಗಳು ಸಾವು

Spread the love

ಬೆಂಗಳೂರು: ಮಂಗನಹಳ್ಳಿಯಲ್ಲಿ ನಡೆದ ವಿದ್ಯುತ್ ಪರಿವರ್ತಕ ಸ್ಫೋಟದಲ್ಲಿ ಗಂಭೀರ ಗಾಯಗೊಂಡಿದ್ದ ಅಪ್ಪ, ಮಗಳು ಮೃತಪಟ್ಟಿದ್ದಾರೆ. ಕೆಲವೇ ದಿನಗಳಲ್ಲಿ ನಡೆಯಬೇಕಿದ್ದ ಮದುವೆಗಾಗಿ ಕಲ್ಯಾಣ ಮಂಟಪ ಬುಕ್​ ಮಾಡಿಕೊಂಡು ಸ್ಕೂಟಿಯಲ್ಲಿ ವಾಪಸ್​ ಮನೆಗೆ ಬರುತ್ತಿದ್ದಾಗ, ರಸ್ತೆ ಪಕ್ಕದಲ್ಲಿದ್ದ ವಿದ್ಯುತ್​ ಪರಿವರ್ತಕ ಸ್ಫೋಟಗೊಂಡು ಯುವತಿ ಚೈತನ್ಯ(25), ಅವರ ತಂದೆ ಶಿವರಾಜ್(55) ಗಂಭೀರವಾಗಿ ಗಾಯಗೊಂಡಿದ್ದರು.

ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗನಹಳ್ಳಿ ಬಳಿ ಬುಧವಾರ ಘಟನೆ ನಡೆದಿತ್ತು‌. ಟ್ರಾನ್ಸ್​ಫಾರ್ಮರ್ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡು ಸುಟ್ಟ ಗಾಯಗಳಾಗಿದ್ದ ಶಿವರಾಜ್ ಹಾಗೂ ಚೈತನ್ಯ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿತ್ತು. ಆದರೆ ಇಬ್ಬರೂ ಕೂಡ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ