Breaking News

ರಸ್ತೆ ದಾಟುತ್ತಿದ್ದ ಬಾಲಕನ ದೇಹ ರಸ್ತೆಯಲ್ಲೇ ಛಿದ್ರ; ಉದ್ರಿಕ್ತ ಜನರಿಂದ ಟಿಪ್ಪರ್​​ಗೆ ಬೆಂಕಿ..

Spread the love

ಕಲಬುರಗಿ: ರಸ್ತೆ ದಾಟುತ್ತಿದ್ದ ಬಾಲಕನಿಗೆ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದು ಆತನ ದೇಹ ರಸ್ತೆಯಲ್ಲೇ ಛಿದ್ರಗೊಂಡಿದ್ದು, ಉದ್ರಿಕ್ತ ಜನರು ಟಿಪ್ಪರ್​ಗೆ ಬೆಂಕಿ ಇಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲಬುರಗಿ ನಗರದ ಹೀರಾಪುರ ಬಡಾವಣೆಯ ಫ್ಲೈಓವರ್ ಬಳಿ ಈ ಅವಘಡ ಸಂಭವಿಸಿದೆ.

 

ಮನೀಷ್ ಮಲ್ಲಿಕಾರ್ಜುನ (10) ಸಾವಿಗೀಡಾದ ಬಾಲಕ. ಈತ ಇಂದು ಪಾಲಕರ ಜತೆ ರಸ್ತೆ ದಾಟುತ್ತಿದ್ದಾಗ ಮುಂದೆ ಓಡಿದ್ದ. ಅದೇ ಸಮಯಕ್ಕೆ ಮೇಲ್ಸೇತುವೆಯಿಂದ ವೇಗವಾಗಿ ಬರುತ್ತಿದ್ದು ಟಿಪ್ಪರ್ ಡಿಕ್ಕಿ ಹೊಡೆದಿದ್ದು, ಬಾಲಕನ ದೇಹ ಛಿದ್ರಗೊಂಡು ಸ್ಥಳದಲ್ಲೇ ಸಾವಿಗೀಡಾಗಿದ.

ಬಾಲಕ ಸಾವಿಗೀಡಾದ್ದನ್ನು ಕಂಡು ರೊಚ್ಚಿಗೆದ್ದ ಜನರು ಟಿಪ್ಪರ್​ಗೆ ಬೆಂಕಿ ಇಟ್ಟಿದ್ದು, ಅದು ಹೊತ್ತಿ ಉರಿದಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ಆರಿಸುವ ಕಾರ್ಯಾಚರಣೆ ನಡೆಸುತ್ತಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಪೊಲೀಸ್ ಭದ್ರತೆ ಒದಗಿಸಲಾಗಿದೆ.


Spread the love

About Laxminews 24x7

Check Also

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the love ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ