Breaking News

ಮಾಜಿ ಸಿದ್ದರಾಮಯ್ಯನವರು ಚುನಾವಣೆಗೆ ಮುನ್ನವೇ ಹತಾಶರಾಗಿದ್ದಾರೆ

Spread the love

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆ ಚುನಾವಣೆಗೆ ಮುನ್ನವೇ ಹತಾಶರಾಗಿ ಹೇಳಿಕೆ ನೀಡಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಟೀಕಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ನಂತರ ಹತಾಶರಾಗುತ್ತಾರೆ ಎಂದುಕೊಂಡಿದ್ದೆವು.

ಮುಖ್ಯಮಂತ್ರಿಯಾದವರು ಸ್ವಾಮೀಜಿಗಳ ಕುರಿತು ಹೇಳಿರುವ ಹೇಳಿಕೆ ಸರಿಯಲ್ಲ.

ಚುನಾವಣೆಗೂ ಮುಂಚೆಯೇ ಸೋಲು ಒಪ್ಪಿಕೊಂಡಿದ್ದಾರೆ.ಎಲ್ಲವನ್ನು ತ್ಯಾಗ ಮಾಡಿ ಸಮಾಜ ಸೇವೆ ಮಾಡುವ ಸ್ವಾಮೀಜಿಗಳ ಬಗ್ಗೆ ಅವರು ಮಾತನಾಡಿರುವುದು ಸರಿಯಲ್ಲ.

ಹೀಗಾಗಿ ಸ್ವಾಮೀಜಿಗಳ ಕ್ಷಮೆಯನ್ನು ಸಿದ್ದರಾಮಯ್ಯ ಯಾಚಿಸಬೇಕು. ವೋಟ್ ಬ್ಯಾಂಕ್ ರಾಜಕಾರಣವನ್ನು ಅವರು ಮಾಡುತ್ತಿದ್ದು, ಆ ವಿಚಾರದಲ್ಲಿ ಸ್ವಾಮೀಜಿಗಳ ವಿಷಯ ಪ್ರಸ್ತಾಪಿಸಿರುವುದು ಸರಿಯಲ್ಲ ಎಂದರು.


Spread the love

About Laxminews 24x7

Check Also

ಬಿಎಂಐಸಿ ಯೋಜನೆಯನ್ನು ಮರುಪರಿಶೀಲಿಸಲು ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

Spread the loveಬೆಂಗಳೂರು: ಕಳೆದ 25 ವರ್ಷಗಳಲ್ಲಿ ಕೇವಲ ಒಂದು ಕಿಲೋ ಮೀಟರ್‌ ಮಾತ್ರ ನಿರ್ಮಾಣಗೊಂಡಿರುವ ಬೆಂಗಳೂರು ಮೈಸೂರು ಮೂಲ ಸೌಕರ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ